ಕ್ಷಣ ಕ್ಷಣಕ್ಕೂ  ಆತಂಕ, ಭಯ ಕಣ್ಣೀರ ಕೋಡಿ: ಗಂಡನ ಜೀವ ಉಳಿಸಿಕೊಳ್ಳಲು ನಿತ್ಯ ಅಲೆದಾಟ!

ಕ್ಷಣ ಕ್ಷಣಕ್ಕೂ ಆತಂಕ, ಭಯ ಕಣ್ಣೀರ ಕೋಡಿ: ಗಂಡನ ಜೀವ ಉಳಿಸಿಕೊಳ್ಳಲು ನಿತ್ಯ ಅಲೆದಾಟ!

Published : Aug 11, 2023, 01:40 PM IST

ರಾಮಯ್ಯ ಆಸ್ಪತ್ರೆಯಲ್ಲಿ ಸಂತೋಷ್‌​ಗೆ ಡಯಾಲಿಸಿಸ್
ಆಗಸ್ಟ್ 17ರೊಳಗೆ ಸಂತೋಷ್‌​ಗೆ ಕಿಡ್ನಿ ಕಸಿ ಆಗಬೇಕಿದೆ
ಸಂತೋಷ್ ಪ್ರಾಣ ಉಳಿಸಲು ಪತ್ನಿ ಐಶ್ವರ್ಯ ಹೋರಾಟ

ಆಸ್ಪತ್ರೆಯ ಬೆಡ್ ಮೇಲೆ ಮಲಗಿರೋ ಸಂತೋಷ್​ ಕಿಡ್ನಿ(kidney) ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸಂತೋಷ್‌ ಮತ್ತು ಐಶ್ವರ್ಯ 2016ರ ಜೂನ್ 24ರಲ್ಲಿ ಪರಸ್ಪರ ಪ್ರೀತಿಸಿ ಮದುವೆ ಆಗಿದ್ರು. ಮದುವೆ ಆದ್ಮೇಲೇ ಹ್ಯಾಪಿ ಆಗಿಯೇ ಲೈಫ್ ಲೀಡ್ ಮಾಡ್ತಾ ಇದ್ರು, ಜೊತೆಗೆ ಇಬ್ಬರು ಮಕ್ಕಳಾದ 5 ವರ್ಷದ ಶರತ್, 6 ವರ್ಷದ ತನೀಶ್ ಜೊತೆಯಲ್ಲಿ ಹಾಯಾಗಿ ಖುಷಿಯಾಗಿದ್ದರು. ಇವರ ಬದುಕು ಅಂದ್ಕೊಂಡಂಗೇ ಸಾಗ್ತಾ ಇತ್ತು. ಆದ್ರೆ, ಇದ್ದಕ್ಕಿದ್ದಂತೆ ಇವರ ಜೀವನದಲ್ಲಿ ಎದ್ದ ಬಿರುಗಾಳಿಗೆ ದಿಕ್ಕು ತೋಚದಂತೆ ಆಗಿದ್ದಾರೆ. 2019ರಲ್ಲಿ ಮೂತ್ರದ ಸೋಂಕು ಎಂದು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂತೋಷ್‌​​ಗೆ ಆಸ್ಪತ್ರೆಯೇ ಖಾಯಂ ಆಗಿ ಬಿಟ್ಟಿತ್ತು, ಹೊಟ್ಟೆಯಲ್ಲಿ ಗಡ್ಡೆ ಇದೆ. ಆಪರೇಷನ್ ಮಾಡಬೇಕು ಎಂದವರು ಕೊನೆಗೆ ಕಿಡ್ನಿ ವೈಫಲ್ಯ ಆಗಿದೆ ಎಂದು ಹೇಳಿಬಿಟ್ಟರು. ವೈದ್ಯರ ಮಾತಿಗೆ ಕಂಗಾಲಾದ ಪತ್ನಿ ಐಶ್ವರ್ಯಗೆ ದಿಕ್ಕುತೋಚದಂತೆ ಆಗಿದೆ.

ಯಾವಾಗ ಕಿಡ್ನಿ ವೈಫಲ್ಯ(kidney failure) ಅನ್ನೋದು  ಗೊತ್ತಾಯ್ತೋ  ಗಂಡನನ್ನ ಉಳಿಸಿಕೊಳ್ಳಲು ಅಲೆಯದ ಆಸ್ಪತ್ರೆಯಿಲ್ಲ. ಕಾಣದ ದೇವರುಗಳಿಲ್ಲಿ. ಗಂಡನ ಚಿಕಿತ್ಸೆಗೆ ಅಲ್ಲಿ ಇಲ್ಲಿ ಹಣಕಾಸು ಹೊಂಚಿ ಲಕ್ಷ..ಲಕ್ಷ.. ಖರ್ಚು ಮಾಡಿ ಟ್ರೀಟ್ಮೆಂಟ್ ಕೊಡಿಸಿದ್ದಾರೆ. ಈ ಹಿಂದೇ ಕೂಡ ನಮ್ಮ ಏಷ್ಯಾನೆಟ್​ ಸುವರ್ಣ ನ್ಯೂಸ್‌​ನ ಬಿಗ್​3ಯಲ್ಲಿ ಸಹಾಯ ಕೇಳಿಕೊಂಡು ಬಂದಿದ್ದರು. ಆಗ ಚಿಕಿತ್ಸೆಗೆ  ಕರೆಂಟ್ ಅಫೇರ್ಸ್ ಎಡಿಟರ್ ಆಗಿರೋ ಜಯಪ್ರಕಾಶ್​​ಶೆಟ್ಟಿ ಅವರು 50 ಸಾವಿರ ಸಹಾಯ ಮಾಡಿದ್ದರು. ಇದೀಗ, ಸಂತೋಷ್‌ಗೆ ತುರ್ತಾಗಿ ಕಿಡ್ನಿ ಕಸಿ ಮಾಡಿಸಬೇಕಿದೆ. ಕಿಡ್ನಿ ದಾನಕ್ಕೆ ಸಂತೋಷ್ ಸೋದರ ಅರುಣ್ ಮುಂದಾಗಿದ್ದು, ಬೆಂಗಳೂರಿನ(Bengaluru) ರಾಮಯ್ಯ ಆಸ್ಪತ್ರೆಯವರು ಆಗಸ್ಟ್ 17ರೊಳಗೆ  7 ಲಕ್ಷ  ಅರೇಂಜ್ ಮಾಡಿಕೊಂಡು ಬಂದ್ರೆ ಸಂತೋಷ್​ ಪ್ರಾಣ ಉಳಿಸಬಹುದು ಅಂದಿದ್ದಾರೆ.​ ಹೀಗಾಗಿ ಈ ಹುಡುಗಿ ಹಣಕ್ಕಾಗಿ ಕಂಡ ಕಂಡವರ ಮನೆ ಬಾಗಿಲು, ರಾಜಕಾರಣಿಗಳ ಮನೆ ಕಾದರು ಯಾರೂ ಈಕೆಯ ನೆರವಿಗೆ ದಾವಿಸಿಲ್ಲ.

ಇದನ್ನೂ ವೀಕ್ಷಿಸಿ:  ಅನಧಿಕೃತ ಖಾಸಗಿ ಶಾಲೆಗಳಿಗೆ ಸದ್ಯದ್ರಲ್ಲೇ ಬೀಳುತ್ತೆ ಬೀಗ: ಆ.14ರೊಳಗೆ ಮುಚ್ಚುವಂತೆ ಖಡಕ್ ಆದೇಶ !

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more