ಸರ್ಪದೋಷ ಅಂದ್ರೆ ಇದೇನಾ?..ಬಾಲಕನನ್ನು ಬಿಟ್ಟು ಮತ್ಯಾರಿಗೂ ಕಾಣದ ನಾಗಪ್ಪ, 2 ತಿಂಗಳಲ್ಲಿ 9 ಬಾರಿ ಕಚ್ಚಿದ ಹಾವು!

ಸರ್ಪದೋಷ ಅಂದ್ರೆ ಇದೇನಾ?..ಬಾಲಕನನ್ನು ಬಿಟ್ಟು ಮತ್ಯಾರಿಗೂ ಕಾಣದ ನಾಗಪ್ಪ, 2 ತಿಂಗಳಲ್ಲಿ 9 ಬಾರಿ ಕಚ್ಚಿದ ಹಾವು!

Published : Aug 29, 2023, 09:04 PM IST


ಇದು ಸರ್ಪದೋಷವೋ ಅಥವಾ ಹುಡುಗನ ದುರಾದೃಷ್ಟವೋ ಗೊತ್ತಿಲ್ಲ. ಕಲಬುರಗಿಯಲ್ಲಿ ಬಾಲಕನೊಬ್ಬನಿಗೆ ಎರಡು ತಿಂಗಳ ಅವಧಿಯಲ್ಲಿ 9 ಬಾರಿ ನಾಗರಹಾವು ಕಚ್ಚಿದೆ. 9 ಬಾರಿಯೂ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
 

ಕಲಬುರಗಿ (ಆ.29): ಹಾವಿನ ದ್ವೇಷನ ಹನ್ನೆರಡು ವರುಷ ಅನ್ನೋದು ಮಾತು. ತನ್ನ ಸೇಡು ತೀರೋವರೆಗೂ ನಾಗರಹಾವು ಬಿಡೋದಿಲ್ಲ. ಅದೇ ರೀತಿಯ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ನಡೆದಿದೆ. 

ಇಲ್ಲಿ ಈ ಬಾಲಕನ ಹೊರತಾಗಿ ಯಾರೊಬ್ಬರಿಗೂ ನಾಗರ ಹಾವು ಕಾಣೋದಿಲ್ಲ. 2 ತಿಂಗಳ ಅವಧಿಯಲ್ಲಿ 9 ಬಾರಿ ನಾಗರಹಾವು ಈತನಿಗೆ ಕಚ್ಚಿದೆ.  ಹಾವಿನ ಕಾಟದಿಂದ ಬೇಸತ್ತಿರುವ ಬಾಲಕನ ಕುಟುಂಬ ಸರ್ಪದೋಷ ಇರಬಹುದು ಎನ್ನುವ ಕಾರಣಕ್ಕೆ ಮನೆಯನ್ನು ಕೂಡ ತೊರೆದಿದೆ.

ವಿರಾಟ್‌ ಕೊಹ್ಲಿ ದಾಖಲೆ ಮುರಿದ ಇಸ್ರೋ, ಚಂದ್ರಯಾನ-3ಗೆ ಸಿಕ್ಕಿತು ಮತ್ತೊಂದು ಹಿರಿಮೆ!

ಹಲಕರ್ಟಿ ಗ್ರಾಮದ ವಿಜಯ್‌ ಕುಮಾರ್ ಹಾಗೂ ಉಷಾ ದಂಪತಿಯ ಪುತ್ರ 15 ವರ್ಷದ ಪ್ರಜ್ವಲ್‌ 9ನೇ ತರಗತಿಯಲ್ಲಿ ಓದುತ್ತಿದ್ದಾನೆ. ಜುಲೈ 3 ರಂದು ಮೊದಲ ಬಾರಿಗೆ ತನಗೆ ಹಾವು ಕಡಿದಿತ್ತು. ಅಲ್ಲಿಂದ ಇಲ್ಲಿಯವರೆಗೂ 9 ಬಾರಿ ಹಾವು ತನಗೆ ಕಚ್ಚಿದೆ ಎಂದು ಪ್ರಜ್ವಲ್‌ ಹೇಳಿಕೊಂಡಿದ್ದಾರೆ. ಇನ್ನು ಪ್ರಜ್ವಲ್‌ನ ಪೋಷಕರು ಹಾವಿನಿಂದ ಮುಕ್ತಿ ಕೊಡಿಸುವಂತೆ ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!