ಸರ್ಪದೋಷ ಅಂದ್ರೆ ಇದೇನಾ?..ಬಾಲಕನನ್ನು ಬಿಟ್ಟು ಮತ್ಯಾರಿಗೂ ಕಾಣದ ನಾಗಪ್ಪ, 2 ತಿಂಗಳಲ್ಲಿ 9 ಬಾರಿ ಕಚ್ಚಿದ ಹಾವು!

ಸರ್ಪದೋಷ ಅಂದ್ರೆ ಇದೇನಾ?..ಬಾಲಕನನ್ನು ಬಿಟ್ಟು ಮತ್ಯಾರಿಗೂ ಕಾಣದ ನಾಗಪ್ಪ, 2 ತಿಂಗಳಲ್ಲಿ 9 ಬಾರಿ ಕಚ್ಚಿದ ಹಾವು!

Published : Aug 29, 2023, 09:04 PM IST


ಇದು ಸರ್ಪದೋಷವೋ ಅಥವಾ ಹುಡುಗನ ದುರಾದೃಷ್ಟವೋ ಗೊತ್ತಿಲ್ಲ. ಕಲಬುರಗಿಯಲ್ಲಿ ಬಾಲಕನೊಬ್ಬನಿಗೆ ಎರಡು ತಿಂಗಳ ಅವಧಿಯಲ್ಲಿ 9 ಬಾರಿ ನಾಗರಹಾವು ಕಚ್ಚಿದೆ. 9 ಬಾರಿಯೂ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
 

ಕಲಬುರಗಿ (ಆ.29): ಹಾವಿನ ದ್ವೇಷನ ಹನ್ನೆರಡು ವರುಷ ಅನ್ನೋದು ಮಾತು. ತನ್ನ ಸೇಡು ತೀರೋವರೆಗೂ ನಾಗರಹಾವು ಬಿಡೋದಿಲ್ಲ. ಅದೇ ರೀತಿಯ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ನಡೆದಿದೆ. 

ಇಲ್ಲಿ ಈ ಬಾಲಕನ ಹೊರತಾಗಿ ಯಾರೊಬ್ಬರಿಗೂ ನಾಗರ ಹಾವು ಕಾಣೋದಿಲ್ಲ. 2 ತಿಂಗಳ ಅವಧಿಯಲ್ಲಿ 9 ಬಾರಿ ನಾಗರಹಾವು ಈತನಿಗೆ ಕಚ್ಚಿದೆ.  ಹಾವಿನ ಕಾಟದಿಂದ ಬೇಸತ್ತಿರುವ ಬಾಲಕನ ಕುಟುಂಬ ಸರ್ಪದೋಷ ಇರಬಹುದು ಎನ್ನುವ ಕಾರಣಕ್ಕೆ ಮನೆಯನ್ನು ಕೂಡ ತೊರೆದಿದೆ.

ವಿರಾಟ್‌ ಕೊಹ್ಲಿ ದಾಖಲೆ ಮುರಿದ ಇಸ್ರೋ, ಚಂದ್ರಯಾನ-3ಗೆ ಸಿಕ್ಕಿತು ಮತ್ತೊಂದು ಹಿರಿಮೆ!

ಹಲಕರ್ಟಿ ಗ್ರಾಮದ ವಿಜಯ್‌ ಕುಮಾರ್ ಹಾಗೂ ಉಷಾ ದಂಪತಿಯ ಪುತ್ರ 15 ವರ್ಷದ ಪ್ರಜ್ವಲ್‌ 9ನೇ ತರಗತಿಯಲ್ಲಿ ಓದುತ್ತಿದ್ದಾನೆ. ಜುಲೈ 3 ರಂದು ಮೊದಲ ಬಾರಿಗೆ ತನಗೆ ಹಾವು ಕಡಿದಿತ್ತು. ಅಲ್ಲಿಂದ ಇಲ್ಲಿಯವರೆಗೂ 9 ಬಾರಿ ಹಾವು ತನಗೆ ಕಚ್ಚಿದೆ ಎಂದು ಪ್ರಜ್ವಲ್‌ ಹೇಳಿಕೊಂಡಿದ್ದಾರೆ. ಇನ್ನು ಪ್ರಜ್ವಲ್‌ನ ಪೋಷಕರು ಹಾವಿನಿಂದ ಮುಕ್ತಿ ಕೊಡಿಸುವಂತೆ ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!