ಕೊಡಗಿನಲ್ಲಿ ಮತ್ತೆ ಪ್ರವಾಹ; ಮತ್ತೆ ಮರುಕಳಿಸಲಿದೆಯಾ 2018ರ ಕರಾಳ ದಿನ..?

ಕೊಡಗಿನಲ್ಲಿ ಮತ್ತೆ ಪ್ರವಾಹ; ಮತ್ತೆ ಮರುಕಳಿಸಲಿದೆಯಾ 2018ರ ಕರಾಳ ದಿನ..?

Published : Jul 17, 2022, 05:15 PM IST

ಕರುನಾಡ ಕಾಶ್ಮೀರ ಅಂತ ಅನಿಸಿಕೊಂಡ ಕೊಡಗು, ಮಳೆಗಾಲ ಬಂದರೆ ಸಾಕು ಇಲ್ಲಿನ ನಕ್ಷೆಯೇ ಬದಲಾಗಿ ಹೋಗಿರುತ್ತೆ. ಸುರಿಯುತ್ತಿರುವ ಮಳೆಗೆ, ನದಿಗಳು ಮೈದುಂಬಿಕೊಂಡು ಹರಿಯುತ್ತಿವೆ. ಅದು ಅಪಾಯದ ಮಟ್ಟ ಮೀರಿ. ಇದರಿಂದ ಜನರ ಜೀವನವೇ ಅಸ್ತವ್ಯಸ್ತವಾಗಿ ಹೋಗಿದೆ.  

ಕರುನಾಡ ಕಾಶ್ಮೀರ ಅಂತ ಅನಿಸಿಕೊಂಡ ಕೊಡಗು(Kodagu)  ಮಳೆಗಾಲ (Rain)  ಬಂದರೆ ಸಾಕು ಇಲ್ಲಿನ ನಕ್ಷೆಯೇ ಬದಲಾಗಿ ಹೋಗಿರುತ್ತೆ. ಸುರಿಯುತ್ತಿರುವ ಮಳೆಗೆ, ನದಿಗಳು ಮೈದುಂಬಿಕೊಂಡು ಹರಿಯುತ್ತಿವೆ. ಅದು ಅಪಾಯದ ಮಟ್ಟ ಮೀರಿ. ಇದರಿಂದ ಜನರ ಜೀವನವೇ ಅಸ್ತವ್ಯಸ್ತವಾಗಿ ಹೋಗಿದೆ.  ಹಲವು ಮನೆಗಳ ಮೇಲೆ ಮರ ಬಿದ್ದು ಮನೆಗಳಿಗೆ ಹಾನಿಯಾಗಿವೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಸುರಿದ ಧಾರಾಕಾರ ಮಳೆಗೆ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಜಲಾವೃತಗೊಂಡಿದೆ. ಭಾಗಮಂಡಲ-ನಾಪೋಕ್ಲು ರಸ್ತೆ ಮೂರನೇ ಬಾರಿ ಜಲಾವೃತಗೊಂಡು ಸಂಪರ್ಕ ಕಡಿತವಾಗಿದೆ. 

ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿ ಮಡಿಕೇರಿ ತಾಲೂಕಿನ ಬಲಮುರಿ ಕೆಳ ಸೇತುವೆ ಮುಳುಗಡೆಗೊಂಡಿದ್ದು 2 ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಭೂಕುಸಿತದ ಭೀತಿಯಿರುವ ತೋರದ 14 ಕುಟುಂಬದ 34 ಜನರನ್ನು ತೋರ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. 

ಕೊಡಗಿನ ಎಂದೂ ಮರೆಯದ ಮಳೆಗಾಲ ಎಂದರೆ ಅದು 2018 ರದ್ದು, ಅಂದಿನ ನಳೆ ಕೊಡಗಿನ ಚಿತ್ರಣವನ್ನೇ ಬದಲಿಸಿತ್ತು. ಈಗಲೂ ಕೊಡಗಿನ ಜನರಿಗೆ ಆ ದಿನಗಳು ನೆನಪಾದರೆ ಸಾಕು, ಬೆಚ್ಚಿ ಬೀಳ್ತಾರೆ. ಈಗ ಮತ್ತೆ ಪ್ರಳಯಾಸುರ ಕೊಡಗಿಗೆ ರೀ ಎಂಟ್ರಿ ಆಗಿದ್ದಾನೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more