Koti Kanta Gaayana: ನೆಲ,ಜಲ, ಆಗಸದಲ್ಲೂ ಮೊಳಗಿತು ಕನ್ನಡ ಡಿಂಡಿಮ..!

Koti Kanta Gaayana: ನೆಲ,ಜಲ, ಆಗಸದಲ್ಲೂ ಮೊಳಗಿತು ಕನ್ನಡ ಡಿಂಡಿಮ..!

Published : Oct 28, 2022, 11:22 PM IST

ರಾಜ್ಯೋತ್ಸವಕ್ಕೂ ಮುನ್ನ ಕನ್ನಡ ಡಿಂಡಿಮ ಮಾರ್ದನಿಸಿದೆ. ಕನ್ನಡ-ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ನನ್ನ ನಾಡು, ನನ್ನ ಹಾಡು ಅಭಿಯಾನದ ಭಾಗವಾಗಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಶುಕ್ರವಾರ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾದವು.

ಬೆಂಗಳೂರು (ಅ. 28): ನೆಲ, ಜಲ, ಆಗಸದಲ್ಲೂ ಮೊಳಗಿತು ಕನ್ನಡ ಡಿಂಡಿಮ. ಎಲ್ಲೆಡೆ ಮೊಳಗಿದ ಕೋಟಿ ಕಂಠಗಳ ಕನ್ನಡ ಗಾಯನ. ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯೋತ್ಸವಕ್ಕೂ ಮುನ್ನ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ.

ಅಂದಾಜು 1.20 ಕೋಟಿ ಜನರು ಏಕಕಾಲದಲ್ಲಿ ಕನ್ನಡದ 6 ಪ್ರಸಿದ್ಧ ಕವಿಗಳು ಬರೆದ ಹಾಡುಗಳನ್ನು ಹಾಡಿದರು. ಆ ಮೂಲಕ ವಿಶ್ವದಾಖಲೆಯನ್ನು ನಿರ್ಮಾಣ ಮಾಡಲಾಯಿತು. ವಿಶ್ವದಾಖಲೆಯ ಪತ್ರವನ್ನು ಸಿಎಂ ಬೊಮ್ಮಾಯಿ ಅವರಿಗೆ ಹಸ್ತಾಂತರ ಮಾಡಲಾಯಿತು. ಕನ್ನಡ ಅಸ್ಮಿತೆಯನ್ನ ಸಾರುವ ವಿನೂತನ ಕಾರ್ಯಕ್ರಮಕ್ಕೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಕಂಠಗಳು ಮೊಳಗಿದವು.

Kannada Rajyotsava: ಬೀದರ್ ಕೋಟೆಯಲ್ಲಿ ಮೊಳಗಿದ ಕೋಟಿ ಕಂಠ ಗಾಯನ

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಇದಕ್ಕಾಗಿಯೇ ಬೃಹತ್ ವೇದಿಕೆ ನಿರ್ಮಾಣವಾಗಿತ್ತು. 50 ಕ್ಕೂ ಹೆಚ್ಚು ಮೈಕ್, ಸ್ಪೀಕರ್, ಎಲ್ಇಡಿ ಅಳವಡಿಸಲಾಗಿತ್ತು. ಜಯ ಭಾರತ ಜನನಿಯ ತನುಜಾತೆ ಹಾಗೂ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಸಿಎಂ ದನಿಗೂಡಿಸಿದರು. ಮಾಜಿ ಸಿಎಂ ಬಿಎಸ್‌ವೈ, ಸಚಿವ ಅಶೋಕ್‌, ಸುನೀಲ್‌ ಕುಮಾರ್‌, ಸದಾನಂದ ಗೌಡ, ಸಂಸದ ತೇಜಸ್ವಿ ಸೂರ್ಯ, ಪಿಸಿ ಮೋಹನ್‌, ಜಗ್ಗೇಶ್ ಭಾಗಿಯಾಗಿದ್ದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more