Koti Kanta Gaayana: ನೆಲ,ಜಲ, ಆಗಸದಲ್ಲೂ ಮೊಳಗಿತು ಕನ್ನಡ ಡಿಂಡಿಮ..!

Koti Kanta Gaayana: ನೆಲ,ಜಲ, ಆಗಸದಲ್ಲೂ ಮೊಳಗಿತು ಕನ್ನಡ ಡಿಂಡಿಮ..!

Published : Oct 28, 2022, 11:22 PM IST

ರಾಜ್ಯೋತ್ಸವಕ್ಕೂ ಮುನ್ನ ಕನ್ನಡ ಡಿಂಡಿಮ ಮಾರ್ದನಿಸಿದೆ. ಕನ್ನಡ-ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ನನ್ನ ನಾಡು, ನನ್ನ ಹಾಡು ಅಭಿಯಾನದ ಭಾಗವಾಗಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಶುಕ್ರವಾರ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾದವು.

ಬೆಂಗಳೂರು (ಅ. 28): ನೆಲ, ಜಲ, ಆಗಸದಲ್ಲೂ ಮೊಳಗಿತು ಕನ್ನಡ ಡಿಂಡಿಮ. ಎಲ್ಲೆಡೆ ಮೊಳಗಿದ ಕೋಟಿ ಕಂಠಗಳ ಕನ್ನಡ ಗಾಯನ. ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯೋತ್ಸವಕ್ಕೂ ಮುನ್ನ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ.

ಅಂದಾಜು 1.20 ಕೋಟಿ ಜನರು ಏಕಕಾಲದಲ್ಲಿ ಕನ್ನಡದ 6 ಪ್ರಸಿದ್ಧ ಕವಿಗಳು ಬರೆದ ಹಾಡುಗಳನ್ನು ಹಾಡಿದರು. ಆ ಮೂಲಕ ವಿಶ್ವದಾಖಲೆಯನ್ನು ನಿರ್ಮಾಣ ಮಾಡಲಾಯಿತು. ವಿಶ್ವದಾಖಲೆಯ ಪತ್ರವನ್ನು ಸಿಎಂ ಬೊಮ್ಮಾಯಿ ಅವರಿಗೆ ಹಸ್ತಾಂತರ ಮಾಡಲಾಯಿತು. ಕನ್ನಡ ಅಸ್ಮಿತೆಯನ್ನ ಸಾರುವ ವಿನೂತನ ಕಾರ್ಯಕ್ರಮಕ್ಕೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಕಂಠಗಳು ಮೊಳಗಿದವು.

Kannada Rajyotsava: ಬೀದರ್ ಕೋಟೆಯಲ್ಲಿ ಮೊಳಗಿದ ಕೋಟಿ ಕಂಠ ಗಾಯನ

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಇದಕ್ಕಾಗಿಯೇ ಬೃಹತ್ ವೇದಿಕೆ ನಿರ್ಮಾಣವಾಗಿತ್ತು. 50 ಕ್ಕೂ ಹೆಚ್ಚು ಮೈಕ್, ಸ್ಪೀಕರ್, ಎಲ್ಇಡಿ ಅಳವಡಿಸಲಾಗಿತ್ತು. ಜಯ ಭಾರತ ಜನನಿಯ ತನುಜಾತೆ ಹಾಗೂ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಸಿಎಂ ದನಿಗೂಡಿಸಿದರು. ಮಾಜಿ ಸಿಎಂ ಬಿಎಸ್‌ವೈ, ಸಚಿವ ಅಶೋಕ್‌, ಸುನೀಲ್‌ ಕುಮಾರ್‌, ಸದಾನಂದ ಗೌಡ, ಸಂಸದ ತೇಜಸ್ವಿ ಸೂರ್ಯ, ಪಿಸಿ ಮೋಹನ್‌, ಜಗ್ಗೇಶ್ ಭಾಗಿಯಾಗಿದ್ದರು.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more