Koti Kanta Gaayana: ನೆಲ,ಜಲ, ಆಗಸದಲ್ಲೂ ಮೊಳಗಿತು ಕನ್ನಡ ಡಿಂಡಿಮ..!

Koti Kanta Gaayana: ನೆಲ,ಜಲ, ಆಗಸದಲ್ಲೂ ಮೊಳಗಿತು ಕನ್ನಡ ಡಿಂಡಿಮ..!

Published : Oct 28, 2022, 11:22 PM IST

ರಾಜ್ಯೋತ್ಸವಕ್ಕೂ ಮುನ್ನ ಕನ್ನಡ ಡಿಂಡಿಮ ಮಾರ್ದನಿಸಿದೆ. ಕನ್ನಡ-ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ನನ್ನ ನಾಡು, ನನ್ನ ಹಾಡು ಅಭಿಯಾನದ ಭಾಗವಾಗಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಶುಕ್ರವಾರ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾದವು.

ಬೆಂಗಳೂರು (ಅ. 28): ನೆಲ, ಜಲ, ಆಗಸದಲ್ಲೂ ಮೊಳಗಿತು ಕನ್ನಡ ಡಿಂಡಿಮ. ಎಲ್ಲೆಡೆ ಮೊಳಗಿದ ಕೋಟಿ ಕಂಠಗಳ ಕನ್ನಡ ಗಾಯನ. ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯೋತ್ಸವಕ್ಕೂ ಮುನ್ನ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ.

ಅಂದಾಜು 1.20 ಕೋಟಿ ಜನರು ಏಕಕಾಲದಲ್ಲಿ ಕನ್ನಡದ 6 ಪ್ರಸಿದ್ಧ ಕವಿಗಳು ಬರೆದ ಹಾಡುಗಳನ್ನು ಹಾಡಿದರು. ಆ ಮೂಲಕ ವಿಶ್ವದಾಖಲೆಯನ್ನು ನಿರ್ಮಾಣ ಮಾಡಲಾಯಿತು. ವಿಶ್ವದಾಖಲೆಯ ಪತ್ರವನ್ನು ಸಿಎಂ ಬೊಮ್ಮಾಯಿ ಅವರಿಗೆ ಹಸ್ತಾಂತರ ಮಾಡಲಾಯಿತು. ಕನ್ನಡ ಅಸ್ಮಿತೆಯನ್ನ ಸಾರುವ ವಿನೂತನ ಕಾರ್ಯಕ್ರಮಕ್ಕೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಕಂಠಗಳು ಮೊಳಗಿದವು.

Kannada Rajyotsava: ಬೀದರ್ ಕೋಟೆಯಲ್ಲಿ ಮೊಳಗಿದ ಕೋಟಿ ಕಂಠ ಗಾಯನ

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಇದಕ್ಕಾಗಿಯೇ ಬೃಹತ್ ವೇದಿಕೆ ನಿರ್ಮಾಣವಾಗಿತ್ತು. 50 ಕ್ಕೂ ಹೆಚ್ಚು ಮೈಕ್, ಸ್ಪೀಕರ್, ಎಲ್ಇಡಿ ಅಳವಡಿಸಲಾಗಿತ್ತು. ಜಯ ಭಾರತ ಜನನಿಯ ತನುಜಾತೆ ಹಾಗೂ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಸಿಎಂ ದನಿಗೂಡಿಸಿದರು. ಮಾಜಿ ಸಿಎಂ ಬಿಎಸ್‌ವೈ, ಸಚಿವ ಅಶೋಕ್‌, ಸುನೀಲ್‌ ಕುಮಾರ್‌, ಸದಾನಂದ ಗೌಡ, ಸಂಸದ ತೇಜಸ್ವಿ ಸೂರ್ಯ, ಪಿಸಿ ಮೋಹನ್‌, ಜಗ್ಗೇಶ್ ಭಾಗಿಯಾಗಿದ್ದರು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more