Koti Kanta Gaayana: ನೆಲ,ಜಲ, ಆಗಸದಲ್ಲೂ ಮೊಳಗಿತು ಕನ್ನಡ ಡಿಂಡಿಮ..!

Koti Kanta Gaayana: ನೆಲ,ಜಲ, ಆಗಸದಲ್ಲೂ ಮೊಳಗಿತು ಕನ್ನಡ ಡಿಂಡಿಮ..!

Published : Oct 28, 2022, 11:22 PM IST

ರಾಜ್ಯೋತ್ಸವಕ್ಕೂ ಮುನ್ನ ಕನ್ನಡ ಡಿಂಡಿಮ ಮಾರ್ದನಿಸಿದೆ. ಕನ್ನಡ-ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ನನ್ನ ನಾಡು, ನನ್ನ ಹಾಡು ಅಭಿಯಾನದ ಭಾಗವಾಗಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಶುಕ್ರವಾರ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾದವು.

ಬೆಂಗಳೂರು (ಅ. 28): ನೆಲ, ಜಲ, ಆಗಸದಲ್ಲೂ ಮೊಳಗಿತು ಕನ್ನಡ ಡಿಂಡಿಮ. ಎಲ್ಲೆಡೆ ಮೊಳಗಿದ ಕೋಟಿ ಕಂಠಗಳ ಕನ್ನಡ ಗಾಯನ. ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯೋತ್ಸವಕ್ಕೂ ಮುನ್ನ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ.

ಅಂದಾಜು 1.20 ಕೋಟಿ ಜನರು ಏಕಕಾಲದಲ್ಲಿ ಕನ್ನಡದ 6 ಪ್ರಸಿದ್ಧ ಕವಿಗಳು ಬರೆದ ಹಾಡುಗಳನ್ನು ಹಾಡಿದರು. ಆ ಮೂಲಕ ವಿಶ್ವದಾಖಲೆಯನ್ನು ನಿರ್ಮಾಣ ಮಾಡಲಾಯಿತು. ವಿಶ್ವದಾಖಲೆಯ ಪತ್ರವನ್ನು ಸಿಎಂ ಬೊಮ್ಮಾಯಿ ಅವರಿಗೆ ಹಸ್ತಾಂತರ ಮಾಡಲಾಯಿತು. ಕನ್ನಡ ಅಸ್ಮಿತೆಯನ್ನ ಸಾರುವ ವಿನೂತನ ಕಾರ್ಯಕ್ರಮಕ್ಕೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಕಂಠಗಳು ಮೊಳಗಿದವು.

Kannada Rajyotsava: ಬೀದರ್ ಕೋಟೆಯಲ್ಲಿ ಮೊಳಗಿದ ಕೋಟಿ ಕಂಠ ಗಾಯನ

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಇದಕ್ಕಾಗಿಯೇ ಬೃಹತ್ ವೇದಿಕೆ ನಿರ್ಮಾಣವಾಗಿತ್ತು. 50 ಕ್ಕೂ ಹೆಚ್ಚು ಮೈಕ್, ಸ್ಪೀಕರ್, ಎಲ್ಇಡಿ ಅಳವಡಿಸಲಾಗಿತ್ತು. ಜಯ ಭಾರತ ಜನನಿಯ ತನುಜಾತೆ ಹಾಗೂ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಸಿಎಂ ದನಿಗೂಡಿಸಿದರು. ಮಾಜಿ ಸಿಎಂ ಬಿಎಸ್‌ವೈ, ಸಚಿವ ಅಶೋಕ್‌, ಸುನೀಲ್‌ ಕುಮಾರ್‌, ಸದಾನಂದ ಗೌಡ, ಸಂಸದ ತೇಜಸ್ವಿ ಸೂರ್ಯ, ಪಿಸಿ ಮೋಹನ್‌, ಜಗ್ಗೇಶ್ ಭಾಗಿಯಾಗಿದ್ದರು.

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more