Koti Kanta Gaayana: ನೆಲ,ಜಲ, ಆಗಸದಲ್ಲೂ ಮೊಳಗಿತು ಕನ್ನಡ ಡಿಂಡಿಮ..!

Koti Kanta Gaayana: ನೆಲ,ಜಲ, ಆಗಸದಲ್ಲೂ ಮೊಳಗಿತು ಕನ್ನಡ ಡಿಂಡಿಮ..!

Published : Oct 28, 2022, 11:22 PM IST

ರಾಜ್ಯೋತ್ಸವಕ್ಕೂ ಮುನ್ನ ಕನ್ನಡ ಡಿಂಡಿಮ ಮಾರ್ದನಿಸಿದೆ. ಕನ್ನಡ-ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ನನ್ನ ನಾಡು, ನನ್ನ ಹಾಡು ಅಭಿಯಾನದ ಭಾಗವಾಗಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಶುಕ್ರವಾರ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾದವು.

ಬೆಂಗಳೂರು (ಅ. 28): ನೆಲ, ಜಲ, ಆಗಸದಲ್ಲೂ ಮೊಳಗಿತು ಕನ್ನಡ ಡಿಂಡಿಮ. ಎಲ್ಲೆಡೆ ಮೊಳಗಿದ ಕೋಟಿ ಕಂಠಗಳ ಕನ್ನಡ ಗಾಯನ. ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯೋತ್ಸವಕ್ಕೂ ಮುನ್ನ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ.

ಅಂದಾಜು 1.20 ಕೋಟಿ ಜನರು ಏಕಕಾಲದಲ್ಲಿ ಕನ್ನಡದ 6 ಪ್ರಸಿದ್ಧ ಕವಿಗಳು ಬರೆದ ಹಾಡುಗಳನ್ನು ಹಾಡಿದರು. ಆ ಮೂಲಕ ವಿಶ್ವದಾಖಲೆಯನ್ನು ನಿರ್ಮಾಣ ಮಾಡಲಾಯಿತು. ವಿಶ್ವದಾಖಲೆಯ ಪತ್ರವನ್ನು ಸಿಎಂ ಬೊಮ್ಮಾಯಿ ಅವರಿಗೆ ಹಸ್ತಾಂತರ ಮಾಡಲಾಯಿತು. ಕನ್ನಡ ಅಸ್ಮಿತೆಯನ್ನ ಸಾರುವ ವಿನೂತನ ಕಾರ್ಯಕ್ರಮಕ್ಕೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಕಂಠಗಳು ಮೊಳಗಿದವು.

Kannada Rajyotsava: ಬೀದರ್ ಕೋಟೆಯಲ್ಲಿ ಮೊಳಗಿದ ಕೋಟಿ ಕಂಠ ಗಾಯನ

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಇದಕ್ಕಾಗಿಯೇ ಬೃಹತ್ ವೇದಿಕೆ ನಿರ್ಮಾಣವಾಗಿತ್ತು. 50 ಕ್ಕೂ ಹೆಚ್ಚು ಮೈಕ್, ಸ್ಪೀಕರ್, ಎಲ್ಇಡಿ ಅಳವಡಿಸಲಾಗಿತ್ತು. ಜಯ ಭಾರತ ಜನನಿಯ ತನುಜಾತೆ ಹಾಗೂ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಸಿಎಂ ದನಿಗೂಡಿಸಿದರು. ಮಾಜಿ ಸಿಎಂ ಬಿಎಸ್‌ವೈ, ಸಚಿವ ಅಶೋಕ್‌, ಸುನೀಲ್‌ ಕುಮಾರ್‌, ಸದಾನಂದ ಗೌಡ, ಸಂಸದ ತೇಜಸ್ವಿ ಸೂರ್ಯ, ಪಿಸಿ ಮೋಹನ್‌, ಜಗ್ಗೇಶ್ ಭಾಗಿಯಾಗಿದ್ದರು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more