ಪರಿಷ್ಕೃತ ಪಠ್ಯ ಪುಸ್ತಕವನ್ನು ವೇದಿಕೆಯಲ್ಲೇ ಹರಿದ ಡಿಕೆ ಶಿವಕುಮಾರ್‌!

ಪರಿಷ್ಕೃತ ಪಠ್ಯ ಪುಸ್ತಕವನ್ನು ವೇದಿಕೆಯಲ್ಲೇ ಹರಿದ ಡಿಕೆ ಶಿವಕುಮಾರ್‌!

Published : Jun 18, 2022, 06:09 PM IST

ಪರಿಷ್ಕೃತ ಪಠ್ಯ ಪುಸ್ತಕವನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವೇದಿಕೆಯಲ್ಲೇ ಹರಿದು ಹಾಕಿದ್ದು, "ಈ ಪಠ್ಯ ಸುಡುವುದು ನನಗೆ ಇಷ್ಟ ಆದರೆ, ಪುಸ್ತಕ ಸುಡಬಾರದು ಎನ್ನುವ ಕಾರಣಕ್ಕಾಗಿ ಇದನ್ನು ಹರಿದಿದ್ದೇನೆ ಎಂದು ಹೇಳಿದ್ದಾರೆ.
 

ಬೆಂಗಳೂರು (ಜೂನ್ 18): ಪರಿಷ್ಕೃತ ಪಠ್ಯಪುಸ್ತಕವನ್ನು ( revised text book ) ವೇದಿಕೆಯಲ್ಲಿಯೇ ಹರಿದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (Kpcc President DK Shivakumar) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪಠ್ಯಪುಸ್ತಕವನ್ನು ಸುಡುವುದು ನನಗೆ ಇಷ್ಟ. ಆದರೆ, ಪುಸ್ತಕ ಸುಡಬಾರದು ಎನ್ನುವ ಏಕೈಕ ಕಾರಣಕ್ಕಾಗಿ ಇದನ್ನು ಹರಿದಿದ್ದೇನೆ ಎಂದು ಹೇಳಿದ್ದಾರೆ.

ಕುವೆಂಪು ಅವರ ಪಠ್ಯವನ್ನು ಕೈಬಿಟ್ಟಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ವಿಚಾರಕ್ಕೆ ಸಂಬಂಧಟ್ಟಂತೆ ನಡೆದ ಪ್ರತಿಭಟನೆಯಲ್ಲಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು. ಫ್ರೀಡಂ ಪಾರ್ಕ್‌ನಲ್ಲಿ (Freedom Park) ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದ ಅವರು ಬಸವರಾಜ ಬೊಮ್ಮಾಯಿ (basavaraj bommai) ಸರ್ಕಾರವನ್ನು ಕಟು ಶಬ್ದಗಳಲ್ಲಿ ಟೀಕೆ ಮಾಡಿದರು.

ದೇಶದ ಅತೀ ಭ್ರಷ್ಟ ಸಚಿವ ಅಂದ್ರೆ ಅದು ಅಶ್ವತ್ಥನಾರಾಯಣ!

ಒಂದು ಚಳುವಳಿಯನ್ನು ಹೇಗೆ ಆರಂಭಿಸಬೇಕು, ಅದನ್ನು ಹೇಗೆ ಮುನ್ನಡೆಸಬೇಕು ಎನ್ನುವುದಕ್ಕೆ ಗೋಕಾಕ್ ಚಳುವಳಿ ಮಾರ್ಗದರ್ಶನ. ಅಂದು ಡಾ.ರಾಜ್ ಕುಮಾರ್ ಅವರು ಇದ್ದರು.
ಅದಕ್ಕಾಗಿ ದೊಡ್ಡ ಕೊಡುಗೆ ನೀಡಿದ್ದರು. ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧದ ಈ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದರು. ಅವರೊಂದಿಗೆ ಮುಖ್ಯಮಂತ್ರಿ ಚಂದ್ರು, ಸಂಗೀತ ನಿರ್ದೇಶಕ ಹಂಸಲೇಖ, ವಿಆರ್ ಸುದರ್ಶನ್, ಸಾರಾ ಗೋವಿಂದ್, ಪ್ರವೀಣ್ ಶೆಟ್ಟಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more