ಪರಿಷ್ಕೃತ ಪಠ್ಯ ಪುಸ್ತಕವನ್ನು ವೇದಿಕೆಯಲ್ಲೇ ಹರಿದ ಡಿಕೆ ಶಿವಕುಮಾರ್‌!

ಪರಿಷ್ಕೃತ ಪಠ್ಯ ಪುಸ್ತಕವನ್ನು ವೇದಿಕೆಯಲ್ಲೇ ಹರಿದ ಡಿಕೆ ಶಿವಕುಮಾರ್‌!

Published : Jun 18, 2022, 06:09 PM IST

ಪರಿಷ್ಕೃತ ಪಠ್ಯ ಪುಸ್ತಕವನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವೇದಿಕೆಯಲ್ಲೇ ಹರಿದು ಹಾಕಿದ್ದು, "ಈ ಪಠ್ಯ ಸುಡುವುದು ನನಗೆ ಇಷ್ಟ ಆದರೆ, ಪುಸ್ತಕ ಸುಡಬಾರದು ಎನ್ನುವ ಕಾರಣಕ್ಕಾಗಿ ಇದನ್ನು ಹರಿದಿದ್ದೇನೆ ಎಂದು ಹೇಳಿದ್ದಾರೆ.
 

ಬೆಂಗಳೂರು (ಜೂನ್ 18): ಪರಿಷ್ಕೃತ ಪಠ್ಯಪುಸ್ತಕವನ್ನು ( revised text book ) ವೇದಿಕೆಯಲ್ಲಿಯೇ ಹರಿದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (Kpcc President DK Shivakumar) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪಠ್ಯಪುಸ್ತಕವನ್ನು ಸುಡುವುದು ನನಗೆ ಇಷ್ಟ. ಆದರೆ, ಪುಸ್ತಕ ಸುಡಬಾರದು ಎನ್ನುವ ಏಕೈಕ ಕಾರಣಕ್ಕಾಗಿ ಇದನ್ನು ಹರಿದಿದ್ದೇನೆ ಎಂದು ಹೇಳಿದ್ದಾರೆ.

ಕುವೆಂಪು ಅವರ ಪಠ್ಯವನ್ನು ಕೈಬಿಟ್ಟಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ವಿಚಾರಕ್ಕೆ ಸಂಬಂಧಟ್ಟಂತೆ ನಡೆದ ಪ್ರತಿಭಟನೆಯಲ್ಲಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು. ಫ್ರೀಡಂ ಪಾರ್ಕ್‌ನಲ್ಲಿ (Freedom Park) ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದ ಅವರು ಬಸವರಾಜ ಬೊಮ್ಮಾಯಿ (basavaraj bommai) ಸರ್ಕಾರವನ್ನು ಕಟು ಶಬ್ದಗಳಲ್ಲಿ ಟೀಕೆ ಮಾಡಿದರು.

ದೇಶದ ಅತೀ ಭ್ರಷ್ಟ ಸಚಿವ ಅಂದ್ರೆ ಅದು ಅಶ್ವತ್ಥನಾರಾಯಣ!

ಒಂದು ಚಳುವಳಿಯನ್ನು ಹೇಗೆ ಆರಂಭಿಸಬೇಕು, ಅದನ್ನು ಹೇಗೆ ಮುನ್ನಡೆಸಬೇಕು ಎನ್ನುವುದಕ್ಕೆ ಗೋಕಾಕ್ ಚಳುವಳಿ ಮಾರ್ಗದರ್ಶನ. ಅಂದು ಡಾ.ರಾಜ್ ಕುಮಾರ್ ಅವರು ಇದ್ದರು.
ಅದಕ್ಕಾಗಿ ದೊಡ್ಡ ಕೊಡುಗೆ ನೀಡಿದ್ದರು. ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧದ ಈ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದರು. ಅವರೊಂದಿಗೆ ಮುಖ್ಯಮಂತ್ರಿ ಚಂದ್ರು, ಸಂಗೀತ ನಿರ್ದೇಶಕ ಹಂಸಲೇಖ, ವಿಆರ್ ಸುದರ್ಶನ್, ಸಾರಾ ಗೋವಿಂದ್, ಪ್ರವೀಣ್ ಶೆಟ್ಟಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more