ಇಡೀ ರಾಜ್ಯಕ್ಕೆ ಬೆಂಕಿ ಹಚ್ಚುವ ವ್ಯಕ್ತಿ ನೀನು, ಈಶ್ವರಪ್ಪ-ಜಮೀರ್ ಮಾತಿನ ಜಟಾಪಟಿ

ಇಡೀ ರಾಜ್ಯಕ್ಕೆ ಬೆಂಕಿ ಹಚ್ಚುವ ವ್ಯಕ್ತಿ ನೀನು, ಈಶ್ವರಪ್ಪ-ಜಮೀರ್ ಮಾತಿನ ಜಟಾಪಟಿ

Published : Mar 24, 2022, 08:34 PM IST

ಕಾನೂನು ಸುವ್ಯವಸ್ಥೆ ಬಗ್ಗೆ ಗಂಭೀರ ಚರ್ಚೆ

ಸಿದ್ಧರಾಮಯ್ಯ ಅವರ ಪ್ರಶ್ನೆಗೆ ಸ್ಪಷ್ಟನೆ ನೀಡಿದ ಕೆಎಸ್ ಈಶ್ವರಪ್ಪ

ಜಮೀರ್-ಈಶ್ವರಪ್ಪ ನಡುವೆ ಏಕವಚನದಲ್ಲೇ ವಾಕ್ಸಮರ

ಬೆಂಗಳೂರು (ಮಾ.24): ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕ (BJP Senior Leader) ಹಾಗೂ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ(K S Eshwarappa) ಮತ್ತು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ (Zameer Ahmed Khan) ನಡುವೆ ಏಕವಚನದಲ್ಲಿಯೇ ಮಾತಿನ ಸಮರ ನಡೆದಿದೆ. ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಈಶ್ವರಪ್ಪ ಮಾತಿಗೆ ಅಡ್ಡ ಬಂದ ಜಮೀರ್ ಅಹ್ಮದ್ ಖಾನ್ ಅವರನ್ನು ಹಿರಿಯ ನಾಯಕ ತರಾಟೆಗೆ ತೆಗೆದುಕೊಂಡರು.

ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಗಂಭೀರ ಚರ್ಚೆ ನಡೆಯುತ್ತಿದ್ದ ಹಂತದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಕೆಲವು ಆರೋಪಗಳನ್ನು ಮಾಡಿದ್ದರು. ಇದಕ್ಕೆ ಈಶ್ವರಪ್ಪ ಸ್ಪಷನೆ ನೀಡುತ್ತಿದ್ದ ಹಂತದಲ್ಲಿ ಜಮೀರ್ ಅಹ್ಮದ್ ಖಾನ್ ಮಧ್ಯದಲ್ಲಿ ಅಡ್ಡಿಪಡಿಸಿದರು. ಈ ವೇಳೆ, ನಿನಗೇನು ಗೊತ್ತು. ಕುತ್ಕೊಳ್ಳಲೋ ಎಂದು ಈಶ್ವರಪ್ಪ ಹೇಳಿದ್ದಾರೆ. ಇಡೀ ರಾಜ್ಯಕ್ಕೆ ಬೆಂಕಿ ಹಚ್ಚೋನು ನೀನು ಎಂದು ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಇಂದಲ್ಲ, ನಾಳೆ ಮುಸ್ಲಿಮರು, ಕ್ರೈಸ್ತರು ಕೂಡ RSS ಆಗ್ತಾರೆ ಎಂದ ಈಶ್ವರಪ್ಪ!

ಈ ವೇಳೆ ಈಶ್ವರಪ್ಪ  ಹಾಗೂ ಜಮೀರ್ ಅಹ್ಮದ್ ನಡುವೆ ಮಾತಿನ ಜಟಾಪಟಿ ನಡೆದಿದೆ. ಕಾನೂನನು ಸುವ್ಯವಸ್ಥೆ ಬಗ್ಗೆ ಮಾತನಾಡೋ ಅಧಿಕಾರ ನಿನಗಿಲ್ಲ. ಕಾಂಗ್ರೆಸ್ ಪಕ್ಷಕ್ಕಲ್ಲ, ಇಡೀ ರಾಜ್ಯಕ್ಕೆ ಬೆಂಕಿ ಹಚ್ಚೋ ಮನುಷ್ಯ ನೀನು ಎಂದು ಈಶ್ವರಪ್ಪ ಹೇಳಿದರು. ಈಶ್ವರಪ್ಪ ಹೇಳಿದ ಮಾತಿಗೆ ಕಾಂಗ್ರೆಸ್ ಪಕ್ಷದವರು ಕಿಡಿಕಾರಿದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more