ಇದು ಮಾಜಿ ಸಿಎಂ ಸ್ವಕ್ಷೇತ್ರದ ಕಥೆ: ನಾಯಕರೇ ವೋಟು ಕೇಳ್ತೀರಾ..ಕೆಲಸ ಮಾಡಲ್ವಾ ?

ಇದು ಮಾಜಿ ಸಿಎಂ ಸ್ವಕ್ಷೇತ್ರದ ಕಥೆ: ನಾಯಕರೇ ವೋಟು ಕೇಳ್ತೀರಾ..ಕೆಲಸ ಮಾಡಲ್ವಾ ?

Published : Aug 18, 2023, 01:29 PM ISTUpdated : Aug 18, 2023, 01:30 PM IST

ನಾವು ಈಗ ಹೇಳಲು ಹೊರಟಿರುವ ಸ್ಟೋರಿ ಇದು ಮಾಜಿ ಸಿಎಂ ಕ್ಷೇತ್ರದ ಕಥೆ. ಇದನ್ನ ನೋಡಿ ದ್ರೆ ಅಯ್ಯೋ ಪಾಪ ಅಂತೀರಿ. ಆ ದೃಶ್ಯ  ನೋಡಿದ್ರೆ ಏನಪ್ಪ ಇವರ ಪಾಡು ಹಿಂಗಿದೆಯಲ್ಲ ಅಂತ ಅನ್ಕೋತಿರಾ.? ಅಷ್ಟಕ್ಕೂ, ಆ ಮಾಜಿ ಸಿಎಂ ಕ್ಷೇತ್ರದಲ್ಲಿ ಆಗ್ತಿರೋದು ಏನು ಗೊತ್ತಾ..? ಈ ಸ್ಪೆಷಲ್ ರಿಪೋಟರ್ ನೋಡಿ.
 

ಇದೀಗ ನಾವು ಹೇಳ ಹೊರಟಿರೋದು ಮಾಜಿ ಸಿಎಂ ಕುಮಾರಸ್ವಾಮಿ ಕ್ಷೇತ್ರ ಚನ್ನಪಟ್ಟಣದ ಕಥೆ ಇದು. ಕುಮಾರಸ್ವಾಮಿಯವರು(HD Kumaraswamy) ವಿಪಕ್ಷಗಳ ವಿರುದ್ಧ ಗುದ್ದಾಡೋದ್ರಲ್ಲಿ ನಿಸ್ಸೀಮರು, ಆದ್ರೆ, ತಮ್ಮ ಕ್ಷೇತ್ರದಲ್ಲಿ ಈ ರೀತಿ ಜನ ಸಮಸ್ಯೆ ಎದುರಿಸ್ತಾ ಇದ್ರು ಯಾರ ಗಮನಕ್ಕೂ ಬಂದಿಲ್ಲ. ಪ್ರತಿ ಮನೆಯ ಮುಂದೆ ಕಿರು ಚರಂಡಿ ಗುಂಡಿಗಳು, ಬೆಳಗಾದರೆ ಸಾಕು ಕೊಳಚೆ ನೀರನ್ನು ಗೋರುವ ಕಾಯಕ, ಅಷ್ಟಕ್ಕೂ ಇಂತಹ ದೃಶ್ಯಗಳು ಕಂಡು ಬಂದಿರೋದು ಯಾವುದೋ ಕುಗ್ರಾಮದಲ್ಲಿ ಅಲ್ಲ, ಅಸಲಿಗೆ ರಾಜ್ಯದಲ್ಲಿ 2 ಬಾರಿ ಮುಖ್ಯಮಂತ್ರಿ ಆಗಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸ್ವಕ್ಷೇತ್ರ ಚನ್ನಪಟ್ಟಣ(channapattana). ಆನಂದಪುರದ 1ನೇ ಅಡ್ಡರಸ್ತೆಯ ನಿವಾಸಿಗಳ ಸ್ಥಿತಿ ಇದು.ಇಲ್ಲಿನ ನಿವಾಸಿಗಳ ಬದುಕೇ ಚರಂಡಿ ಗುಂಡಿಯಾಗಿ ಬಿಟ್ಟಿದೆ. ಚನ್ನಪಟ್ಟಣ ನಗರಸಭಾ ವ್ಯಾಪ್ತಿಯ 29ನೇ ವಾರ್ಡ್‌ಗೆ ಸೇರುವ ಆನಂದಪುರ 1ನೇ ಅಡ್ಡರಸ್ತೆಯಲ್ಲಿ 50ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ. ಇಲ್ಲಿನ ನಿವಾಸಿಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳು ಮರೀಚಿಕೆ ಯಾಗಿವೆ. ರಸ್ತೆಯಿಲ್ಲ, ಒಳಚರಂಡಿ ವ್ಯವಸ್ಥೆ ಬಗ್ಗೆ ಕೇಳಲೇ ಬೇಡಿ, ಮನೆ ಮುಂದೆ ಗುಂಡಿ ನಿರ್ಮಿಸಿಕೊಂಡು ಬರಿಗೈಯಲ್ಲಿ ಮೋರಿ ನೀರನ್ನ ಬಾಚಿ ಹೊರಹಾಕುವ ಪರಿಸ್ಥಿತಿ ಯಾರಿಗೂ ಬೇಡ ಸ್ವಾಮಿ.ಬರೀ ಕೊಳಚೆ ನೀರು ಗೋರುವುದಲ್ಲದೇ ಅದನ್ನು ಬಕೆಟ್ಟುಗಳಲ್ಲಿ ತುಂಬಿಕೊಂಡು ಮುಖ್ಯರಸ್ತೆಯ ಚರಂಡಿಯಲ್ಲಿ ಸುರಿಯುವುದೇ ದಿನನಿತ್ಯದ ಕಾಯಕವಾಗಿದೆ.

ಇದನ್ನೂ ವೀಕ್ಷಿಸಿ:  ಹೊರ ಬಿತ್ತು ಮತ್ತೊಂದು ಸಮೀಕ್ಷೆ..ಮೋದಿಗೆ ಮತ್ತೆ ರಾಜ ಸಿಂಹಾಸನ..!

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?