ತಮಿಳುನಾಡು ಸಿಎಂ ಸ್ನೇಹ, ಪ್ರೀತಿಗಾಗಿ ಕರ್ನಾಟಕ ಜನರನ್ನು ಬಲಿಕೊಡಬೇಡಿ: ಕುರುಬೂರು ಶಾಂತಕುಮಾರ್‌

ತಮಿಳುನಾಡು ಸಿಎಂ ಸ್ನೇಹ, ಪ್ರೀತಿಗಾಗಿ ಕರ್ನಾಟಕ ಜನರನ್ನು ಬಲಿಕೊಡಬೇಡಿ: ಕುರುಬೂರು ಶಾಂತಕುಮಾರ್‌

Published : Sep 26, 2023, 11:43 AM IST

ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುತ್ತಿರುವುದನ್ನು ಖಂಡಿಸಿ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಈ ಬಗ್ಗೆ ರೈತರ ಮುಖಂಡ ಕುರುಬೂರು ಶಾಂತಕುಮಾರ್‌ ಮಾತನಾಡಿದ್ದಾರೆ.
 

ಬೆಂಗಳೂರು: ನಾವು ಗಲಾಟೆ ಮಾಡಲ್ಲ ಶಾಂತಿ ರೀತಿಯಲ್ಲಿ ಪ್ರತಿಭಟನೆ (Protest) ಮಾಡುತ್ತೇವೆ. ಸಾಮಾಜಘಾತುಕ ಶಕ್ತಿಗಳು ದುಷ್ಕೃತ್ಯ ಮಾಡಿದ್ರೆ ಅವರನ್ನು ಬಂಧಿಸಿ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್(Kuruburu Shanthakumar) ಹೇಳಿದ್ದಾರೆ. ನಾವು ರೈತರ ಋಣ ತೀರಿಸೋಕೆ ಕೆಲಸ ಮಾಡುತ್ತಿದ್ದೇವೆ. ಎಲ್ಲಾ ಪಕ್ಷಗಳು ನಮಗೆ ಸಹಕಾರ ಕೊಟ್ಟಿವೆ. ನಾವು ಸರ್ಕಾರಕ್ಕೆ ಪಾಠ ಕಲಿಸೇ ಕಲಿಸುತ್ತೇವೆ. ಕರ್ನಾಟಕದ ರೈತರು ಬೀದಿಗಿಳಿದ್ರೆ, ಎಲ್ಲಾವನ್ನು ಸರ್ಕಾರ ನೋಡಿಕೊಳ್ಳಬೇಕಾಗುತ್ತದೆ. ತಮಿಳುನಾಡು(Tamilnadu) ಸಿಎಂ ಸ್ನೇಹ, ಪ್ರೀತಿಗಾಗಿ ಕರ್ನಾಟಕ ಜನರನ್ನು ಬಲಿಕೊಡಬೇಡಿ ಎಂದು ಕುರುಬೂರು ಶಾಂತಕುಮಾರ್ ಆಕ್ರೋಶವನ್ನು ವ್ಯಕ್ತಪಡಿಸಿದರು. ಸರ್ಕಾರ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಇದಕ್ಕೆ ಜನರೇ ಬುದ್ಧಿ ಕಲಿಸುತ್ತಾರೆ. ಈ ಸರ್ಕಾರ ರಾತ್ರೋ ರಾತ್ರಿ ಕದ್ದುಮುಚ್ಚಿ ನೀರನ್ನು ಬಿಡುತ್ತಿದೆ. ಇದು ತಮಿಳುನಾಡು ಸರ್ಕಾರದ ಏಜೆಂಟ್‌ ಸರ್ಕಾರ ಇದಾಗಿದೆ ಎಂದು ಕುರುಬೂರು ಶಾಂತಕುಮಾರ್‌ ಹೇಳಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ರೈತರೊಂದಿಗೆ ರಸ್ತೆಯಲ್ಲೇ ತಿಂಡಿ ಮಾಡಿ ವಿನೂತನ ಪ್ರತಿಭಟನೆ ಮಾಡಿದರು.

ಇದನ್ನೂ ವೀಕ್ಷಿಸಿ:  ಮಂಡ್ಯದಲ್ಲಿ ಭುಗಿಲೆದ್ದ ಕಾವೇರಿ ಹೋರಾಟ: ಇಂದು ಮಳವಳ್ಳಿ ಪಟ್ಟಣ ಬಂದ್‌ಗೆ ಅನ್ನದಾನಿ ಕರೆ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more