ಅರಬ್ಬೀ ಸಮುದ್ರದಲ್ಲಿ ಕ್ಯಾರ್ ಹಾವಳಿ; ಅಬ್ಬರಕ್ಕೆ ಬೆಚ್ಚಿಬಿತ್ತು ಕರಾವಳಿ

Oct 26, 2019, 1:03 PM IST

ಮಂಗಳೂರು (ಅ.26): ರಾಜ್ಯ ಕರಾವಳಿಗೆ ಕ್ಯಾರ್ ಚಂಡಮಾರುತ ಅಪ್ಪಳಿಸಿದೆ. ಕ್ಯಾರ್ ಅಬ್ಬರಕ್ಕೆ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಜನಜೀವನ ಅಸ್ತವ್ಯಸ್ತವಾಗಿದೆ. 

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕ್ಯಾರ್ ತೀವ್ರತೆಯೂ ಹೆಚ್ಚಾಗಿದೆ. ಕರಾವಳಿಯಲ್ಲಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.  

ಕರಾವಳಿ ಜಿಲ್ಲೆಗಳಲ್ಲಿ ಸಮುದ್ರ ತಟದಲ್ಲಿರುವ ಮನೆಗಳಿಗೆ ಅಲೆಗಳು ಅಪ್ಪಳಿಸುತ್ತಿವೆ, ಸುಂಟರಗಾಳಿ ಜನರಲ್ಲಿ ಆತಂಕ ಸೃಷ್ಟಿಸಿದೆ, ಒಂದು ಕ್ಷಣ ವಿರಾಮವಿಲ್ಲದೆ ಸುರಿಯುತ್ತಿರುವ ಮಳೆಗೆ ಜನ ಹೈರಾಣಾಗಿದ್ದಾರೆ. ಇಲ್ಲಿದೆ ಮತ್ತಷ್ಟು ವಿವರ...