ನಾಳೆಯಿಂದ ಊರಿಗೆ ಹೋಗುವವರಿಗೆ ಪ್ರತ್ಯೇಕ ವ್ಯವಸ್ಥೆ; ವೈದ್ಯಕೀಯ ಸಿಬ್ಬಂದಿ ನೇಮಕ

May 3, 2020, 5:02 PM IST

ಬೆಂಗಳೂರು (ಮೇ. 03): ಮೂರು ದಿನ ಕಾರ್ಮಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗುವುದು. ನಾಳೆಯಿಂದ ಬೇರೆ ಬೇರೆ ಕಡೆ ಹೋಗುವ ಪ್ರಯಾಣಿಕರಿಗೆ ಪ್ರತ್ಯೇಕ ಬಸ್ ನಿಲ್ದಾಣದ ವ್ಯವಸ್ಥೆ ಮಾಡಲಾಗುವುದು. ಎಲ್ಲಿಯೂ ನೂಕುನುಗ್ಗಲಾಗದಂತೆ ನೋಡಿಕೊಳ್ಳಿ. ಪ್ರತಿ ಬಸ್ ನಿಲ್ದಾಣದಲ್ಲಿ ವೈದ್ಯಕೀಯ ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ. 

ಚಿತ್ರದುರ್ಗದಲ್ಲಿ ಸರ್ಕಾರಿ ಬಸ್‌ ಸಂಚಾರ..! ಅರ್ಧದಷ್ಟುಸೀಟುಗಳಿಗೆ ಮಾತ್ರ ಅವಕಾಶ

ಊರುಗಳಿಗೆ ತೆರಳಲು ಬಸ್ ವ್ಯವಸ್ಥೆ ಮಾಡಲಾಗಿದೆ ಎಂಬ ವಿಚಾರ ತಿಳಿದು ಸಾವಿರಾರು ಜನ ಮೆಜೆಸ್ಟಿಕ್‌ಗೆ ಜಮಾಯಿಸಿದ್ದರು. ಅವ್ಯವಸ್ಥೆ ಉಂಟಾಗಿತ್ತು. ಸುವರ್ಣ ನ್ಯೂಸ್ ವರದಿ ಬಳಿಕ ಸರ್ಕಾರ ಎಚ್ಚೆತ್ತುಕೊಂಡಿದ್ದು ಪ್ರತ್ಯೇಕ ವ್ಯವಸ್ಥೆ ಮಾಡಲು ನಿರ್ಧರಿಸಿದೆ. 

"