‘ವನವಾಸದ ಬಳಿಕ ದೀಪಾವಳಿ’ ಡಿಕೆಶಿಯನ್ನು ರಾಮನಿಗೆ ಹೋಲಿಸಿದ ಲಕ್ಷ್ಮೀ

Oct 23, 2019, 5:54 PM IST

ಬೆಂಗಳೂರು (ಅ.23): ಹವಾಲಾ ವ್ಯವಹಾರಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿದ್ದ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್‌ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ.

ಡಿಕೆಶಿ ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಡಿಕೆಶಿಗೆ ಜಾಮೀನು ಸಿಕ್ಕಿರುವ ವಿಚಾರ ಕಾಂಗ್ರೆಸ್ ಪಾಳೆಯದಲ್ಲಿ ಸಂಭ್ರಮ ಮನೆಮಾಡಿದೆ. ಈ ಪ್ರಕರಣದಲ್ಲಿ ED ಅಧಿಕಾರಿಗಳು ಕಾಂಗ್ರೆಸ್ ನಾಯಕಿ, ಡಿಕೆಶಿ ಆಪ್ತೆ ಲಕ್ಷ್ಮೀ ಹೆಬ್ಬಾಳ್ಕರ್‌ರನ್ನು ಕೂಡಾ ವಿಚಾರಣೆಗೊಳಪಡಿಸಿದ್ದರು.

ಈ ಸಂದರ್ಭ ಸುವರ್ಣನ್ಯೂಸ್ ಜೊತೆ ಮಾತನಾಡಿದ ಬೆಳಗಾವಿ ಗ್ರಾಮೀಣ ಶಾಸಕಿ  ಲಕ್ಷ್ಮೀ ಹೆಬ್ಬಾಳ್ಕರ್ಸಂತೋಷ ವ್ಯಕ್ತಪಡಿಸಿದರು. ಡಿಕೆಶಿಯನ್ನು ರಾಮನಿಗೆ ಹೋಲಿಸಿದ ಶಾಸಕಿ ಏನು ಹೇಳಿದ್ದಾರೆ ನೋಡಿ....