Ram Mandir: ಸಕ್ಕರೆ ನಾಡಿಗೂ ಶ್ರೀರಾಮನಿಗೂ ಇದೆ ಸಂಬಂಧ..! ಬಾಣದಿಂದಲೇ ಸೃಷ್ಟಿಸಿದ ಧನುಷ್ಕೋಟಿ..!

Ram Mandir: ಸಕ್ಕರೆ ನಾಡಿಗೂ ಶ್ರೀರಾಮನಿಗೂ ಇದೆ ಸಂಬಂಧ..! ಬಾಣದಿಂದಲೇ ಸೃಷ್ಟಿಸಿದ ಧನುಷ್ಕೋಟಿ..!

Published : Jan 21, 2024, 08:25 AM IST

ಅಯೋಧ್ಯೆಯ ಶ್ರೀರಾಮನಿಗೂ ಸಕ್ಕರೆ ನಾಡು ಮಂಡ್ಯ ಹಾಗೂ ಮೈಸೂರಿಗೂ ನಂಟಿದೆ. 14 ವರ್ಷಗಳ ವನವಾಸದ ವೇಳೆ ಸೀತಾಮಾತೆ,ಲಕ್ಷ್ಮಣನೊಂದಿಗೆ ಶ್ರೀರಾಮ ಮೇಲುಕೋಟೆಗೆ ಬಂದಿದ್ದನಂತೆ. ಅಷ್ಟೇ ಅಲ್ಲದೇ ಮೈಸೂರಿನಲ್ಲಿ ಶ್ರೀರಾಮನ ಹಾಗೂ ಸೀತೆಯ ಕುರುಹುಗಳಿವೆ. ಹಾಗಾದ್ರೆ ಮಂಡ್ಯ ಹಾಗೂ ಮೈಸೂರಿನಲ್ಲಿ ಶ್ರೀರಾಮನ ಪಯಣ ಹೇಗಿತ್ತು ಬನ್ನಿ ನೋಡೋಣ..

ಶ್ರೀರಾಮಚಂದ್ರ ಭರತ ಖಂಡದಾದ್ಯಂತ ಸಂಚರಿಸಿದ್ದ ಎಂಬುದಕ್ಕೆ ಹತ್ತು ಹಲವು ಕುರುಹುಗಳು ನಮ್ಮ ನಡುವೆಯಿದ್ದು, ಆತನ ಪಾದಸ್ಪರ್ಶದ ಸ್ಥಳಗಳು ಇಂದಿಗೂ ಪರಮ ಪುಣ್ಯ ಸ್ಥಳವಾಗಿ ಪೂಜಿಸಲ್ಪಡುತ್ತಿದೆ. ಇವತ್ತು ನಮ್ಮ ರಾಜ್ಯದಲ್ಲಿ ರಾಮನೊಂದಿಗೆ(Lord Rama) ನೇರ ಸಂಬಂಧ ಹೊಂದಿದ ಹತ್ತು ಹಲವು ಸ್ಥಳಗಳಿದ್ದು, ಪ್ರತಿ ಸ್ಥಳವೂ ತೇತ್ರಾಯುಗದ ರಾಮಾಯಣ(Ramayana) ಮತ್ತು ರಾಮನೊಂದಿಗೆ ಬೆರೆತುಕೊಂಡಿರುವುದು ಕಾಣಿಸುತ್ತಿದೆ. ಮೇಲುಕೋಟೆಯಲ್ಲಿರುವ(Melukote) ಧನುಷ್ಕೋಟಿ(Dhanushkoti) ಬಗ್ಗೆ ತಿಳಿಯುತ್ತಾ ಹೋದಂತೆ ರಾಮನಿಗೂ ಮೇಲುಕೋಟೆಗೂ ಇರುವ ನಂಟಿನ ಬಗ್ಗೆ ಗೊತ್ತಾಗುತ್ತೆ. ಅಯೋಧ್ಯೆಯಿಂದ ವನವಾಸಕ್ಕೆ ಸೀತೆ ಲಕ್ಷ್ಮಣರೊಂದಿಗೆ 14 ವರ್ಷಗಳ ಕಾಲ ವನವಾಸಕ್ಕೆ ತೆರಳಿದ ಶ್ರೀರಾಮ ಎಲ್ಲೆಡೆ ಸುತ್ತಾಡಿದ್ದನು. ಈತ ಎಲ್ಲೆಲ್ಲಿಗೆ ಹೋಗಿದ್ದನೋ ಆ ಸ್ಥಳಗಳು ಪುಣ್ಯ ಕ್ಷೇತ್ರವಾಗಿವೆ.

ರಾಮ ಸೀತೆಯರ ದೇವಸ್ಥಾನಕ್ಕೆ ಹೋದ್ರೆ, ರಾಮನ ಎಡ ಭಾಗದಲ್ಲಿ ಸೀತೆ ಇರೋದನ್ನ ನೋಡಿದ್ದೀವಿ. ಆದ್ರೆ, ಈ ದೇವಸ್ಥಾನದಲ್ಲಿ ಶ್ರೀರಾಮನ ಬಲಭಾಗದಲ್ಲಿ ಸೀತಾಮಾತೆಯನ್ನ ಕಾಣಬಹುದಾಗಿದೆ. ಈ ರೀತಿ ಭಕ್ತರಿಗೆ ರಾಮ ಹಾಗೂ ಸೀತೆ ದರ್ಶನ ನೀಡೋದಕ್ಕೆ ಒಂದು ಕಾರಣವಿದೆ.ಇದು ಮೈಸೂರಿನ(Mysore) ಕೆ.ಆರ್. ನಗರ ತಾಲೂಕಿನ ಚುಂಚನಕಟ್ಟೆ(chunchanakatte) ಗ್ರಾಮದಲ್ಲಿರುವ ಶ್ರೀ ರಾಮ ದೇವಸ್ಥಾನ. ಇಲ್ಲಿ ಸೀತಾಮಾತೆಯು ರಾಮನ ಬಲ ಭಾಗದಲ್ಲಿ ನಿಂತು ಭಕ್ತರಿಗೆ ದರ್ಶನ ನೀಡೋದೆ ಇಲ್ಲಿನ ವಿಶೇಷ. ಈ ಹಿಂದೆ ವನವಾಸದ ಸಮಯದಲ್ಲಿ ಶ್ರೀ ರಾಮ, ಸೀತೆ, ಲಕ್ಷ್ಮಣ ಚುಂಚನಕಟ್ಟೆಗೆ ಆಗಮಿಸಿದ್ದರು. ಈ ಸಮಯದಲ್ಲಿ ಚುಂಚನಕಟ್ಟೆಯಲ್ಲಿಯೇ ತೃಣಬಿಂದು ಮಹರ್ಷಿಗಳು ಬೀಡು ಬಿಟ್ಟಿರುತ್ತಾರೆ. ಅದೇ ಸಂದರ್ಭಕ್ಕೆ ಚುಂಚನಕಟ್ಟೆಯಲ್ಲಿ ಲಕ್ಷ್ಮಣ ಸೀತಾಮಾತೆಯ ಸ್ನಾನಕ್ಕಾಗಿ ಸೀತೆ ಮಡುವನ್ನು ನಿರ್ಮಿಸಿರುತ್ತಾನೆ. ಇದರ ನೀರನ್ನ ಹರಿಯುವಂತೆ ಮಾಡು ಎಂದು ಮಹರ್ಷಿಗಳು ಶ್ರೀರಾಮನನ್ನ ಕೇಳಿಕೊಳ್ಳುತ್ತಾರೆ. ಅಷ್ಟೇ ಅಲ್ಲ, ಸೀತಾಮಾತೆಯನ್ನು ಬಲಭಾಗದಲ್ಲಿರಿಸಿ ದರ್ಶನ ನೀಡುವಂತೆಯೂ ಶ್ರೀರಾಮನಿಗೆ ನಿವೇದಿಸಿಕೊಳ್ಳುತ್ತಾರೆ.

ಇದನ್ನೂ ವೀಕ್ಷಿಸಿ:  ರಾಮಮಂದಿರ ಧ್ವಂಸ ಬಳಿಕ ಕಠೋರ ಪ್ರತಿಜ್ಞೆ ಮಾಡಿದ್ದ ಕುಟುಂಬ, 500 ವರ್ಷದ ಬಳಿಕ ಅಂತ್ಯ!

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more