Ram Mandir: ಸಕ್ಕರೆ ನಾಡಿಗೂ ಶ್ರೀರಾಮನಿಗೂ ಇದೆ ಸಂಬಂಧ..! ಬಾಣದಿಂದಲೇ ಸೃಷ್ಟಿಸಿದ ಧನುಷ್ಕೋಟಿ..!

Ram Mandir: ಸಕ್ಕರೆ ನಾಡಿಗೂ ಶ್ರೀರಾಮನಿಗೂ ಇದೆ ಸಂಬಂಧ..! ಬಾಣದಿಂದಲೇ ಸೃಷ್ಟಿಸಿದ ಧನುಷ್ಕೋಟಿ..!

Published : Jan 21, 2024, 08:25 AM IST

ಅಯೋಧ್ಯೆಯ ಶ್ರೀರಾಮನಿಗೂ ಸಕ್ಕರೆ ನಾಡು ಮಂಡ್ಯ ಹಾಗೂ ಮೈಸೂರಿಗೂ ನಂಟಿದೆ. 14 ವರ್ಷಗಳ ವನವಾಸದ ವೇಳೆ ಸೀತಾಮಾತೆ,ಲಕ್ಷ್ಮಣನೊಂದಿಗೆ ಶ್ರೀರಾಮ ಮೇಲುಕೋಟೆಗೆ ಬಂದಿದ್ದನಂತೆ. ಅಷ್ಟೇ ಅಲ್ಲದೇ ಮೈಸೂರಿನಲ್ಲಿ ಶ್ರೀರಾಮನ ಹಾಗೂ ಸೀತೆಯ ಕುರುಹುಗಳಿವೆ. ಹಾಗಾದ್ರೆ ಮಂಡ್ಯ ಹಾಗೂ ಮೈಸೂರಿನಲ್ಲಿ ಶ್ರೀರಾಮನ ಪಯಣ ಹೇಗಿತ್ತು ಬನ್ನಿ ನೋಡೋಣ..

ಶ್ರೀರಾಮಚಂದ್ರ ಭರತ ಖಂಡದಾದ್ಯಂತ ಸಂಚರಿಸಿದ್ದ ಎಂಬುದಕ್ಕೆ ಹತ್ತು ಹಲವು ಕುರುಹುಗಳು ನಮ್ಮ ನಡುವೆಯಿದ್ದು, ಆತನ ಪಾದಸ್ಪರ್ಶದ ಸ್ಥಳಗಳು ಇಂದಿಗೂ ಪರಮ ಪುಣ್ಯ ಸ್ಥಳವಾಗಿ ಪೂಜಿಸಲ್ಪಡುತ್ತಿದೆ. ಇವತ್ತು ನಮ್ಮ ರಾಜ್ಯದಲ್ಲಿ ರಾಮನೊಂದಿಗೆ(Lord Rama) ನೇರ ಸಂಬಂಧ ಹೊಂದಿದ ಹತ್ತು ಹಲವು ಸ್ಥಳಗಳಿದ್ದು, ಪ್ರತಿ ಸ್ಥಳವೂ ತೇತ್ರಾಯುಗದ ರಾಮಾಯಣ(Ramayana) ಮತ್ತು ರಾಮನೊಂದಿಗೆ ಬೆರೆತುಕೊಂಡಿರುವುದು ಕಾಣಿಸುತ್ತಿದೆ. ಮೇಲುಕೋಟೆಯಲ್ಲಿರುವ(Melukote) ಧನುಷ್ಕೋಟಿ(Dhanushkoti) ಬಗ್ಗೆ ತಿಳಿಯುತ್ತಾ ಹೋದಂತೆ ರಾಮನಿಗೂ ಮೇಲುಕೋಟೆಗೂ ಇರುವ ನಂಟಿನ ಬಗ್ಗೆ ಗೊತ್ತಾಗುತ್ತೆ. ಅಯೋಧ್ಯೆಯಿಂದ ವನವಾಸಕ್ಕೆ ಸೀತೆ ಲಕ್ಷ್ಮಣರೊಂದಿಗೆ 14 ವರ್ಷಗಳ ಕಾಲ ವನವಾಸಕ್ಕೆ ತೆರಳಿದ ಶ್ರೀರಾಮ ಎಲ್ಲೆಡೆ ಸುತ್ತಾಡಿದ್ದನು. ಈತ ಎಲ್ಲೆಲ್ಲಿಗೆ ಹೋಗಿದ್ದನೋ ಆ ಸ್ಥಳಗಳು ಪುಣ್ಯ ಕ್ಷೇತ್ರವಾಗಿವೆ.

ರಾಮ ಸೀತೆಯರ ದೇವಸ್ಥಾನಕ್ಕೆ ಹೋದ್ರೆ, ರಾಮನ ಎಡ ಭಾಗದಲ್ಲಿ ಸೀತೆ ಇರೋದನ್ನ ನೋಡಿದ್ದೀವಿ. ಆದ್ರೆ, ಈ ದೇವಸ್ಥಾನದಲ್ಲಿ ಶ್ರೀರಾಮನ ಬಲಭಾಗದಲ್ಲಿ ಸೀತಾಮಾತೆಯನ್ನ ಕಾಣಬಹುದಾಗಿದೆ. ಈ ರೀತಿ ಭಕ್ತರಿಗೆ ರಾಮ ಹಾಗೂ ಸೀತೆ ದರ್ಶನ ನೀಡೋದಕ್ಕೆ ಒಂದು ಕಾರಣವಿದೆ.ಇದು ಮೈಸೂರಿನ(Mysore) ಕೆ.ಆರ್. ನಗರ ತಾಲೂಕಿನ ಚುಂಚನಕಟ್ಟೆ(chunchanakatte) ಗ್ರಾಮದಲ್ಲಿರುವ ಶ್ರೀ ರಾಮ ದೇವಸ್ಥಾನ. ಇಲ್ಲಿ ಸೀತಾಮಾತೆಯು ರಾಮನ ಬಲ ಭಾಗದಲ್ಲಿ ನಿಂತು ಭಕ್ತರಿಗೆ ದರ್ಶನ ನೀಡೋದೆ ಇಲ್ಲಿನ ವಿಶೇಷ. ಈ ಹಿಂದೆ ವನವಾಸದ ಸಮಯದಲ್ಲಿ ಶ್ರೀ ರಾಮ, ಸೀತೆ, ಲಕ್ಷ್ಮಣ ಚುಂಚನಕಟ್ಟೆಗೆ ಆಗಮಿಸಿದ್ದರು. ಈ ಸಮಯದಲ್ಲಿ ಚುಂಚನಕಟ್ಟೆಯಲ್ಲಿಯೇ ತೃಣಬಿಂದು ಮಹರ್ಷಿಗಳು ಬೀಡು ಬಿಟ್ಟಿರುತ್ತಾರೆ. ಅದೇ ಸಂದರ್ಭಕ್ಕೆ ಚುಂಚನಕಟ್ಟೆಯಲ್ಲಿ ಲಕ್ಷ್ಮಣ ಸೀತಾಮಾತೆಯ ಸ್ನಾನಕ್ಕಾಗಿ ಸೀತೆ ಮಡುವನ್ನು ನಿರ್ಮಿಸಿರುತ್ತಾನೆ. ಇದರ ನೀರನ್ನ ಹರಿಯುವಂತೆ ಮಾಡು ಎಂದು ಮಹರ್ಷಿಗಳು ಶ್ರೀರಾಮನನ್ನ ಕೇಳಿಕೊಳ್ಳುತ್ತಾರೆ. ಅಷ್ಟೇ ಅಲ್ಲ, ಸೀತಾಮಾತೆಯನ್ನು ಬಲಭಾಗದಲ್ಲಿರಿಸಿ ದರ್ಶನ ನೀಡುವಂತೆಯೂ ಶ್ರೀರಾಮನಿಗೆ ನಿವೇದಿಸಿಕೊಳ್ಳುತ್ತಾರೆ.

ಇದನ್ನೂ ವೀಕ್ಷಿಸಿ:  ರಾಮಮಂದಿರ ಧ್ವಂಸ ಬಳಿಕ ಕಠೋರ ಪ್ರತಿಜ್ಞೆ ಮಾಡಿದ್ದ ಕುಟುಂಬ, 500 ವರ್ಷದ ಬಳಿಕ ಅಂತ್ಯ!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more