Jan 17, 2022, 12:07 PM IST
ಧರ್ಮಸ್ಥಳ (ಜ. 17): ಪ್ರಧಾನಿ ನರೇಂದ್ರ ಮೋದಿ (PM MOdi) ಅವರ ದೀರ್ಘಾಯುಷ್ಯ ಹಾಗೂ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಧರ್ಮಸ್ಥಳ (Dharmasthala) ಕ್ಷೇತ್ರದಲ್ಲಿ ಶಾಸಕ ಹರೀಶ ಪೂಂಜ ನೇತೃತ್ವದಲ್ಲಿ ಇಂದು ಮಹಾ ಮೃತ್ಯುಂಜಯ ಹೋಮ ನಡೆಯುತ್ತಿದೆ.
Covid 19: ಸೋಂಕು ನಿಯಂತ್ರಕ್ಕೆ ಬಿಗಿ ಕ್ರಮ..? ಇಂದು ಸಿಎಂ ಮಹತ್ವದ ಸಭೆ
ಧರ್ಮಸ್ಥಳ ದೇಗುಲದ ಆವರಣದಲ್ಲಿ ಏಳು ಹೋಮಕುಂಡಗಳಲ್ಲಿ ಮಹಾಯಾಗ ನಡೆಯಲಿದೆ. ವೇದಮೂರ್ತಿ ನಾಗೇಂದ್ರ ಭಾರದ್ವಾಜ್ ಅವರ ನೇತೃತ್ವದಲ್ಲಿ ಕರಾವಳಿಯ ವಿವಿಧೆಡೆಯ 108 ಅರ್ಚಕರು ಯಾಗದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 7ರಿಂದ ಪ್ರಾರಂಭವಾಗಿ ಚತುರ್ವೇದ ಪಾರಾಯಣ, ಬಳಿಕ ಗೋಪೂಜೆ, ಮಹಾಗಣಪತಿ ಹೋಮ ಬಳಿಕ ಮೃತ್ಯುಂಜಯ ಹೋಮ ನೆರವೇರಲಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಉಪಸ್ಥಿತರಿರಲಿದ್ದಾರೆ. ಸಚಿವರಾದ ಈಶ್ವರಪ್ಪ, ಸಿ.ಸಿ.ಪಾಟೀಲ್, ಶಶಿಕಲಾ ಜೊಲ್ಲೆ ಸೇರಿ ಹಲವು ಸಚಿವರು, ಶಾಸಕರು ಯಾಗದಲ್ಲಿ ಭಾಗಿಯಾಗಲಿದ್ದಾರೆ.