ಆಂಜನೇಯ ಹುಟ್ಟಿದ್ದು ಎಲ್ಲಿ? ಮಹಾರಾಷ್ಟ್ರದಿಂದ ಹೊಸ ವಾದ!

ಆಂಜನೇಯ ಹುಟ್ಟಿದ್ದು ಎಲ್ಲಿ? ಮಹಾರಾಷ್ಟ್ರದಿಂದ ಹೊಸ ವಾದ!

Published : Jun 01, 2022, 11:40 PM IST

ರಾಮ ಭಕ್ತ ಹನುಮ ಹುಟ್ಟಿದ ಸ್ಥಳ ಯಾವುದು? ಕರ್ನಾಟಕವೂ ಅಲ್ಲ, ಆಂಧ್ರವೂ ಅಲ್ಲ ಅಂತಿದೆ ಮಹಾರಾಷ್ಟ್ರ! ಆಂಜನೇಯನ ಜನ್ಮಸ್ಥಳದ ಬಗ್ಗೆ ಮಹಾರಾಷ್ಟ್ರದ ಹೊಸ ವಾದವೇನು?

ಕೊಪ್ಪಳ (ಜೂ.01): ಆಂಜನೇಯನ ಜನ್ಮಸ್ಥಳದ ಕುರಿತ ವಿವಾದ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಇತ್ತೀಚಿಗಷ್ಟೇ ತಿರುಪತಿಯ ಅಂಜನಾದ್ರಿಯಲ್ಲಿ ಆಂಜನೇಯನ ಜನ್ಮವಾಗಿದೆ ಎಂದು ಟಿಟಿಡಿ ಕ್ಯಾತೆ ತಗೆದಿತ್ತು.ಇದೀಗ ಮಹಾರಾಷ್ಟ್ರ ಕಿರಿಕ್ ತೆಗೆದಿದ್ದು, ಅಂಜನೇರಿ ಆಂಜನೇಯನ ಜನ್ಮಸ್ಥಳ ಎಂದು ವಾದಿಸುತ್ತಿದೆ. ಆದರೆ ನಮ್ಮ‌ವರು ಮಾತ್ರ ಅಂಜನಾದ್ರಿಯೇ ಆಂಜನೇಯನ‌ ಜನ್ಮಸ್ಥಳ ಎಂದು ಪ್ರತಿಪಾದಿಸುತ್ತಿದ್ದಾರೆ. 

ಆಂಜನೇಯನ ಜನ್ಮಸ್ಥಳದ ವಿವಾದವೇನು?: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪ್ರದೇಶ ಅಂದರೆ ತಟ್ಟನೆ ನೆನಪಾಗುವುದು ಆಂಜನೇಯನ ಜನ್ಮಸ್ಥಳ ಎಂದು. ಪುರಾಣ ಕಾಲದಿಂದಲೂ ಅಂಜನಾದ್ರಿಯಲ್ಲಿಯೇ ಆಂಜನೇಯನ ಜನ್ಮವಾಗಿದೆ ಎನ್ನುವ ಐತಿಹ್ಯ ಇದೆ. ಅಷ್ಟೇ ಅಲ್ಲ ಜನರ ನಂಬಿಕೆಯೂ ಸಹ ಇದ್ದು, ಇತಿಹಾಸ ತಜ್ಞರ ಪ್ರಕಾರವೂ ಸಜ ಕಿಷ್ಕಿಂದಾ ಪ್ರದೇಶವಾದ ಅಂಜನಾದ್ರಿಯೇ ಆಂಜನೇಯಮ ಜನ್ಮಸ್ಥಳ ಎಂದು ಹೇಳುತ್ತಾ ಬಂದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಆಂಜನೇಯನ ಜನ್ಮಸ್ಥಳದ ಕುರಿತು ಪಕ್ಕದ ರಾಜ್ಯಗಳು ಕ್ಯಾತೆ ತೆಗೆಯುತ್ತಿವೆ. 

UPSC ಎಕ್ಸಾಂ ಪಾಸ್ ಆದ ಬಳಿಕವೇ ಮದುವೆ ಅಂದ್ರಿದ್ರು ನನ್ನ ತಾಯಿ: ಟಾಪರ್ ಅರುಣಾ

ಮೊದಲನೆಯದಾಗಿ ಆಂಧ್ರಪ್ರದೇಶದ ತಿರುಪತಿ ಬಳಿ ಇರುವ ಅಂಜನಾದ್ರಿ ಆಂಜನೇಯನ ಜನ್ಮಸ್ಥಳ ಎಂದು ಟಿಟಿಡಿ ವಾದಿಸಿತ್ತು. ಅಷ್ಟೇ ಅಲ್ಲ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಅಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸಹ ಮಾಡಲು ಟಿಟಿಡಿ ಮುಂದಾಗಿದೆ. ಇದು ಮುಗಿಯುವ ಹೊತ್ತಿಗೆ ಇದೀಗ ಮಹಾರಾಷ್ಟ್ರ ರಾಜ್ಯವೂ ಸಹ ಆಂಜನೇಯನ ಜನ್ಮಸ್ಥಳ ಅಂಜನೇರಿ ಎಂದು ಕ್ಯಾತೆ ತೆಗೆದಿದೆ.‌ಆದರೆ ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶದ ರಾಜ್ಯಗಳ ಈ ವಾದಕ್ಕೆ ರಾಜ್ಯದ ಇತಿಹಾಸಕಾರರು ವಿರೋಧ ವ್ಯಕ್ತಪಡಿಸಿದ್ದು, ಆಂಜನೇಯನ ಜನ್ಮಸ್ಥಳ ನಮ್ಮ‌ ಅಂಜನಾದ್ರಿಯೇ ಎಂದು ಪ್ರತಿಪಾದಿಸಿದ್ದಾರೆ. ಹೆಚ್ಚಿನ  ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more