ಆಂಜನೇಯ ಹುಟ್ಟಿದ್ದು ಎಲ್ಲಿ? ಮಹಾರಾಷ್ಟ್ರದಿಂದ ಹೊಸ ವಾದ!

ಆಂಜನೇಯ ಹುಟ್ಟಿದ್ದು ಎಲ್ಲಿ? ಮಹಾರಾಷ್ಟ್ರದಿಂದ ಹೊಸ ವಾದ!

Published : Jun 01, 2022, 11:40 PM IST

ರಾಮ ಭಕ್ತ ಹನುಮ ಹುಟ್ಟಿದ ಸ್ಥಳ ಯಾವುದು? ಕರ್ನಾಟಕವೂ ಅಲ್ಲ, ಆಂಧ್ರವೂ ಅಲ್ಲ ಅಂತಿದೆ ಮಹಾರಾಷ್ಟ್ರ! ಆಂಜನೇಯನ ಜನ್ಮಸ್ಥಳದ ಬಗ್ಗೆ ಮಹಾರಾಷ್ಟ್ರದ ಹೊಸ ವಾದವೇನು?

ಕೊಪ್ಪಳ (ಜೂ.01): ಆಂಜನೇಯನ ಜನ್ಮಸ್ಥಳದ ಕುರಿತ ವಿವಾದ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಇತ್ತೀಚಿಗಷ್ಟೇ ತಿರುಪತಿಯ ಅಂಜನಾದ್ರಿಯಲ್ಲಿ ಆಂಜನೇಯನ ಜನ್ಮವಾಗಿದೆ ಎಂದು ಟಿಟಿಡಿ ಕ್ಯಾತೆ ತಗೆದಿತ್ತು.ಇದೀಗ ಮಹಾರಾಷ್ಟ್ರ ಕಿರಿಕ್ ತೆಗೆದಿದ್ದು, ಅಂಜನೇರಿ ಆಂಜನೇಯನ ಜನ್ಮಸ್ಥಳ ಎಂದು ವಾದಿಸುತ್ತಿದೆ. ಆದರೆ ನಮ್ಮ‌ವರು ಮಾತ್ರ ಅಂಜನಾದ್ರಿಯೇ ಆಂಜನೇಯನ‌ ಜನ್ಮಸ್ಥಳ ಎಂದು ಪ್ರತಿಪಾದಿಸುತ್ತಿದ್ದಾರೆ. 

ಆಂಜನೇಯನ ಜನ್ಮಸ್ಥಳದ ವಿವಾದವೇನು?: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪ್ರದೇಶ ಅಂದರೆ ತಟ್ಟನೆ ನೆನಪಾಗುವುದು ಆಂಜನೇಯನ ಜನ್ಮಸ್ಥಳ ಎಂದು. ಪುರಾಣ ಕಾಲದಿಂದಲೂ ಅಂಜನಾದ್ರಿಯಲ್ಲಿಯೇ ಆಂಜನೇಯನ ಜನ್ಮವಾಗಿದೆ ಎನ್ನುವ ಐತಿಹ್ಯ ಇದೆ. ಅಷ್ಟೇ ಅಲ್ಲ ಜನರ ನಂಬಿಕೆಯೂ ಸಹ ಇದ್ದು, ಇತಿಹಾಸ ತಜ್ಞರ ಪ್ರಕಾರವೂ ಸಜ ಕಿಷ್ಕಿಂದಾ ಪ್ರದೇಶವಾದ ಅಂಜನಾದ್ರಿಯೇ ಆಂಜನೇಯಮ ಜನ್ಮಸ್ಥಳ ಎಂದು ಹೇಳುತ್ತಾ ಬಂದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಆಂಜನೇಯನ ಜನ್ಮಸ್ಥಳದ ಕುರಿತು ಪಕ್ಕದ ರಾಜ್ಯಗಳು ಕ್ಯಾತೆ ತೆಗೆಯುತ್ತಿವೆ. 

UPSC ಎಕ್ಸಾಂ ಪಾಸ್ ಆದ ಬಳಿಕವೇ ಮದುವೆ ಅಂದ್ರಿದ್ರು ನನ್ನ ತಾಯಿ: ಟಾಪರ್ ಅರುಣಾ

ಮೊದಲನೆಯದಾಗಿ ಆಂಧ್ರಪ್ರದೇಶದ ತಿರುಪತಿ ಬಳಿ ಇರುವ ಅಂಜನಾದ್ರಿ ಆಂಜನೇಯನ ಜನ್ಮಸ್ಥಳ ಎಂದು ಟಿಟಿಡಿ ವಾದಿಸಿತ್ತು. ಅಷ್ಟೇ ಅಲ್ಲ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಅಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸಹ ಮಾಡಲು ಟಿಟಿಡಿ ಮುಂದಾಗಿದೆ. ಇದು ಮುಗಿಯುವ ಹೊತ್ತಿಗೆ ಇದೀಗ ಮಹಾರಾಷ್ಟ್ರ ರಾಜ್ಯವೂ ಸಹ ಆಂಜನೇಯನ ಜನ್ಮಸ್ಥಳ ಅಂಜನೇರಿ ಎಂದು ಕ್ಯಾತೆ ತೆಗೆದಿದೆ.‌ಆದರೆ ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶದ ರಾಜ್ಯಗಳ ಈ ವಾದಕ್ಕೆ ರಾಜ್ಯದ ಇತಿಹಾಸಕಾರರು ವಿರೋಧ ವ್ಯಕ್ತಪಡಿಸಿದ್ದು, ಆಂಜನೇಯನ ಜನ್ಮಸ್ಥಳ ನಮ್ಮ‌ ಅಂಜನಾದ್ರಿಯೇ ಎಂದು ಪ್ರತಿಪಾದಿಸಿದ್ದಾರೆ. ಹೆಚ್ಚಿನ  ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more