ಆಂಜನೇಯ ಹುಟ್ಟಿದ್ದು ಎಲ್ಲಿ? ಮಹಾರಾಷ್ಟ್ರದಿಂದ ಹೊಸ ವಾದ!

ಆಂಜನೇಯ ಹುಟ್ಟಿದ್ದು ಎಲ್ಲಿ? ಮಹಾರಾಷ್ಟ್ರದಿಂದ ಹೊಸ ವಾದ!

Published : Jun 01, 2022, 11:40 PM IST

ರಾಮ ಭಕ್ತ ಹನುಮ ಹುಟ್ಟಿದ ಸ್ಥಳ ಯಾವುದು? ಕರ್ನಾಟಕವೂ ಅಲ್ಲ, ಆಂಧ್ರವೂ ಅಲ್ಲ ಅಂತಿದೆ ಮಹಾರಾಷ್ಟ್ರ! ಆಂಜನೇಯನ ಜನ್ಮಸ್ಥಳದ ಬಗ್ಗೆ ಮಹಾರಾಷ್ಟ್ರದ ಹೊಸ ವಾದವೇನು?

ಕೊಪ್ಪಳ (ಜೂ.01): ಆಂಜನೇಯನ ಜನ್ಮಸ್ಥಳದ ಕುರಿತ ವಿವಾದ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಇತ್ತೀಚಿಗಷ್ಟೇ ತಿರುಪತಿಯ ಅಂಜನಾದ್ರಿಯಲ್ಲಿ ಆಂಜನೇಯನ ಜನ್ಮವಾಗಿದೆ ಎಂದು ಟಿಟಿಡಿ ಕ್ಯಾತೆ ತಗೆದಿತ್ತು.ಇದೀಗ ಮಹಾರಾಷ್ಟ್ರ ಕಿರಿಕ್ ತೆಗೆದಿದ್ದು, ಅಂಜನೇರಿ ಆಂಜನೇಯನ ಜನ್ಮಸ್ಥಳ ಎಂದು ವಾದಿಸುತ್ತಿದೆ. ಆದರೆ ನಮ್ಮ‌ವರು ಮಾತ್ರ ಅಂಜನಾದ್ರಿಯೇ ಆಂಜನೇಯನ‌ ಜನ್ಮಸ್ಥಳ ಎಂದು ಪ್ರತಿಪಾದಿಸುತ್ತಿದ್ದಾರೆ. 

ಆಂಜನೇಯನ ಜನ್ಮಸ್ಥಳದ ವಿವಾದವೇನು?: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪ್ರದೇಶ ಅಂದರೆ ತಟ್ಟನೆ ನೆನಪಾಗುವುದು ಆಂಜನೇಯನ ಜನ್ಮಸ್ಥಳ ಎಂದು. ಪುರಾಣ ಕಾಲದಿಂದಲೂ ಅಂಜನಾದ್ರಿಯಲ್ಲಿಯೇ ಆಂಜನೇಯನ ಜನ್ಮವಾಗಿದೆ ಎನ್ನುವ ಐತಿಹ್ಯ ಇದೆ. ಅಷ್ಟೇ ಅಲ್ಲ ಜನರ ನಂಬಿಕೆಯೂ ಸಹ ಇದ್ದು, ಇತಿಹಾಸ ತಜ್ಞರ ಪ್ರಕಾರವೂ ಸಜ ಕಿಷ್ಕಿಂದಾ ಪ್ರದೇಶವಾದ ಅಂಜನಾದ್ರಿಯೇ ಆಂಜನೇಯಮ ಜನ್ಮಸ್ಥಳ ಎಂದು ಹೇಳುತ್ತಾ ಬಂದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಆಂಜನೇಯನ ಜನ್ಮಸ್ಥಳದ ಕುರಿತು ಪಕ್ಕದ ರಾಜ್ಯಗಳು ಕ್ಯಾತೆ ತೆಗೆಯುತ್ತಿವೆ. 

UPSC ಎಕ್ಸಾಂ ಪಾಸ್ ಆದ ಬಳಿಕವೇ ಮದುವೆ ಅಂದ್ರಿದ್ರು ನನ್ನ ತಾಯಿ: ಟಾಪರ್ ಅರುಣಾ

ಮೊದಲನೆಯದಾಗಿ ಆಂಧ್ರಪ್ರದೇಶದ ತಿರುಪತಿ ಬಳಿ ಇರುವ ಅಂಜನಾದ್ರಿ ಆಂಜನೇಯನ ಜನ್ಮಸ್ಥಳ ಎಂದು ಟಿಟಿಡಿ ವಾದಿಸಿತ್ತು. ಅಷ್ಟೇ ಅಲ್ಲ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಅಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸಹ ಮಾಡಲು ಟಿಟಿಡಿ ಮುಂದಾಗಿದೆ. ಇದು ಮುಗಿಯುವ ಹೊತ್ತಿಗೆ ಇದೀಗ ಮಹಾರಾಷ್ಟ್ರ ರಾಜ್ಯವೂ ಸಹ ಆಂಜನೇಯನ ಜನ್ಮಸ್ಥಳ ಅಂಜನೇರಿ ಎಂದು ಕ್ಯಾತೆ ತೆಗೆದಿದೆ.‌ಆದರೆ ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶದ ರಾಜ್ಯಗಳ ಈ ವಾದಕ್ಕೆ ರಾಜ್ಯದ ಇತಿಹಾಸಕಾರರು ವಿರೋಧ ವ್ಯಕ್ತಪಡಿಸಿದ್ದು, ಆಂಜನೇಯನ ಜನ್ಮಸ್ಥಳ ನಮ್ಮ‌ ಅಂಜನಾದ್ರಿಯೇ ಎಂದು ಪ್ರತಿಪಾದಿಸಿದ್ದಾರೆ. ಹೆಚ್ಚಿನ  ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more