Kolar: ಅನುದಾನ ವಿಚಾರ: ಕೈ ಕೈ ಮಿಲಾಯಿಸುವ ಹಂತ ತಲುಪಿದ ಮುನಿಸ್ವಾಮಿ, ನಂಜೇಗೌಡ

Kolar: ಅನುದಾನ ವಿಚಾರ: ಕೈ ಕೈ ಮಿಲಾಯಿಸುವ ಹಂತ ತಲುಪಿದ ಮುನಿಸ್ವಾಮಿ, ನಂಜೇಗೌಡ

Published : Feb 16, 2022, 09:50 AM ISTUpdated : Feb 16, 2022, 10:37 AM IST

ಮಾಲೂರು  ಪುರಸಭೆಯಲ್ಲಿ ಕರೆಯಲಾಗಿದ್ದ ಸದಸ್ಯರ ಸಾಮಾನ್ಯ ಸಭೆಯಲ್ಲಿ ಜನತೆಯನ್ನು ಪ್ರತಿನಿಧಿಸಬೇಕಾದ ಶಾಸಕ ಹಾಗೂ ಸಂಸದರಿಬ್ಬರು ಪ್ರತಿಷ್ಠೆಯನ್ನು ಮುಂದಿಟ್ಟುಕೊಂಡು ಕ್ಷುಲಕ ಕಾರಣಕ್ಕಾಗಿ ನಡೆಸಿದ ವಾಗ್ವಾದ ಸಾರ್ವಜನಿಕ ಟೀಕೆಗೆ ಒಳಗಾಗಿದೆ.

ಕೋಲಾರ (ಫೆ. 16): ಮಾಲೂರು  ಪುರಸಭೆಯಲ್ಲಿ ಕರೆಯಲಾಗಿದ್ದ ಸದಸ್ಯರ ಸಾಮಾನ್ಯ ಸಭೆಯಲ್ಲಿ ಜನತೆಯನ್ನು ಪ್ರತಿನಿಧಿಸಬೇಕಾದ ಶಾಸಕ ಹಾಗೂ ಸಂಸದರಿಬ್ಬರು ಪ್ರತಿಷ್ಠೆಯನ್ನು ಮುಂದಿಟ್ಟುಕೊಂಡು ಕ್ಷುಲಕ ಕಾರಣಕ್ಕಾಗಿ ನಡೆಸಿದ ವಾಗ್ವಾದ ಸಾರ್ವಜನಿಕ ಟೀಕೆಗೆ ಒಳಗಾಗಿದೆ.

ಪುರಸಭೆ ಅಧ್ಯಕ್ಷೆ ಅನಿತಾ ನಾಗರಾಜು ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಾಮಾನ್ಯ ಸಭೆಯಲ್ಲಿ ಮುಖ್ಯಮಂತ್ರಿಯವರ ವಿಶೇಷ ಅನುದಾನದ 20 ಕೋಟಿ ಮಂಜೂರು ಮಾಡುವ ಪ್ರಸ್ತಾವನೆ ವಿಷಯದಲ್ಲಿ ಶಾಸಕ ನಂಜೇಗೌಡರು ಪುರಸಭೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ತಾವೇ 8.5 ಕೋಟಿ ರು.ಗಳಿಗೆ ಕ್ರಿಯಾ ಯೋಜನೆಯ ಪಟ್ಟಿತಯಾರಿಸಿದ್ದನ್ನು ಸಂಸದ ಮುನಿಸ್ವಾಮಿ ಪ್ರಶ್ನಿಸಿದರು. ಇದರಿಂದ ಕೋಪಗೊಂಡ ಶಾಸಕ ನಂಜೇಗೌಡ, ನಾನು ಈ ತಾಲೂಕಿನ ಶಾಸಕನಾಗಿ ಶಾಸನ ಬದ್ದವಾಗಿ ಇರುವ ನನ್ನ ಹಕ್ಕನ್ನು ಚಲಾಯಿಸಿದ್ದೇನೆ. ಯಾವುದಾದರೂ ಬದಲಾವಣೆ ಅವಶ್ಯ ಇದ್ದಲ್ಲಿ ಪುರಸಭೆ ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿಗಳು ನನ್ನೊಡನೆ ಚರ್ಚಿಸಿ ಕಾಮಗಾರಿ ಪಟ್ಟಿಯನ್ನು ಬದಲಾಯಿಸಲಿ. ಇದೊಂದು ಸಣ್ಣ ವಿಷಯ. ಸಂಸದ ಮುನಿಸ್ವಾಮಿ ಅವರು ಕ್ಷೇತ್ರದ ಪ್ರತಿ ತಾಲೂಕಿನಲ್ಲೂ ಇದೇ ರೀತಿ ತೀಟೆ ಮಾಡುವುದನ್ನು ಬಿಡಬೇಕು ಎಂದರು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more