Kolar: ಅನುದಾನ ವಿಚಾರ: ಕೈ ಕೈ ಮಿಲಾಯಿಸುವ ಹಂತ ತಲುಪಿದ ಮುನಿಸ್ವಾಮಿ, ನಂಜೇಗೌಡ

Kolar: ಅನುದಾನ ವಿಚಾರ: ಕೈ ಕೈ ಮಿಲಾಯಿಸುವ ಹಂತ ತಲುಪಿದ ಮುನಿಸ್ವಾಮಿ, ನಂಜೇಗೌಡ

Published : Feb 16, 2022, 09:50 AM ISTUpdated : Feb 16, 2022, 10:37 AM IST

ಮಾಲೂರು  ಪುರಸಭೆಯಲ್ಲಿ ಕರೆಯಲಾಗಿದ್ದ ಸದಸ್ಯರ ಸಾಮಾನ್ಯ ಸಭೆಯಲ್ಲಿ ಜನತೆಯನ್ನು ಪ್ರತಿನಿಧಿಸಬೇಕಾದ ಶಾಸಕ ಹಾಗೂ ಸಂಸದರಿಬ್ಬರು ಪ್ರತಿಷ್ಠೆಯನ್ನು ಮುಂದಿಟ್ಟುಕೊಂಡು ಕ್ಷುಲಕ ಕಾರಣಕ್ಕಾಗಿ ನಡೆಸಿದ ವಾಗ್ವಾದ ಸಾರ್ವಜನಿಕ ಟೀಕೆಗೆ ಒಳಗಾಗಿದೆ.

ಕೋಲಾರ (ಫೆ. 16): ಮಾಲೂರು  ಪುರಸಭೆಯಲ್ಲಿ ಕರೆಯಲಾಗಿದ್ದ ಸದಸ್ಯರ ಸಾಮಾನ್ಯ ಸಭೆಯಲ್ಲಿ ಜನತೆಯನ್ನು ಪ್ರತಿನಿಧಿಸಬೇಕಾದ ಶಾಸಕ ಹಾಗೂ ಸಂಸದರಿಬ್ಬರು ಪ್ರತಿಷ್ಠೆಯನ್ನು ಮುಂದಿಟ್ಟುಕೊಂಡು ಕ್ಷುಲಕ ಕಾರಣಕ್ಕಾಗಿ ನಡೆಸಿದ ವಾಗ್ವಾದ ಸಾರ್ವಜನಿಕ ಟೀಕೆಗೆ ಒಳಗಾಗಿದೆ.

ಪುರಸಭೆ ಅಧ್ಯಕ್ಷೆ ಅನಿತಾ ನಾಗರಾಜು ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಾಮಾನ್ಯ ಸಭೆಯಲ್ಲಿ ಮುಖ್ಯಮಂತ್ರಿಯವರ ವಿಶೇಷ ಅನುದಾನದ 20 ಕೋಟಿ ಮಂಜೂರು ಮಾಡುವ ಪ್ರಸ್ತಾವನೆ ವಿಷಯದಲ್ಲಿ ಶಾಸಕ ನಂಜೇಗೌಡರು ಪುರಸಭೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ತಾವೇ 8.5 ಕೋಟಿ ರು.ಗಳಿಗೆ ಕ್ರಿಯಾ ಯೋಜನೆಯ ಪಟ್ಟಿತಯಾರಿಸಿದ್ದನ್ನು ಸಂಸದ ಮುನಿಸ್ವಾಮಿ ಪ್ರಶ್ನಿಸಿದರು. ಇದರಿಂದ ಕೋಪಗೊಂಡ ಶಾಸಕ ನಂಜೇಗೌಡ, ನಾನು ಈ ತಾಲೂಕಿನ ಶಾಸಕನಾಗಿ ಶಾಸನ ಬದ್ದವಾಗಿ ಇರುವ ನನ್ನ ಹಕ್ಕನ್ನು ಚಲಾಯಿಸಿದ್ದೇನೆ. ಯಾವುದಾದರೂ ಬದಲಾವಣೆ ಅವಶ್ಯ ಇದ್ದಲ್ಲಿ ಪುರಸಭೆ ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿಗಳು ನನ್ನೊಡನೆ ಚರ್ಚಿಸಿ ಕಾಮಗಾರಿ ಪಟ್ಟಿಯನ್ನು ಬದಲಾಯಿಸಲಿ. ಇದೊಂದು ಸಣ್ಣ ವಿಷಯ. ಸಂಸದ ಮುನಿಸ್ವಾಮಿ ಅವರು ಕ್ಷೇತ್ರದ ಪ್ರತಿ ತಾಲೂಕಿನಲ್ಲೂ ಇದೇ ರೀತಿ ತೀಟೆ ಮಾಡುವುದನ್ನು ಬಿಡಬೇಕು ಎಂದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more