Mangaluru blast case: ಅಪ್ಪ ದೇಶ ಕಾಯೋ ಸೈನಿಕ, ಮಗ ಉಗ್ರ! ಅಬ್ದುಲ್ ಮತೀನ್‌ಗೆ ಟೆರರ್ ನಂಟು ಬೆಳೆದಿದ್ದೆಲ್ಲಿ?

Mangaluru blast case: ಅಪ್ಪ ದೇಶ ಕಾಯೋ ಸೈನಿಕ, ಮಗ ಉಗ್ರ! ಅಬ್ದುಲ್ ಮತೀನ್‌ಗೆ ಟೆರರ್ ನಂಟು ಬೆಳೆದಿದ್ದೆಲ್ಲಿ?

Published : Nov 22, 2022, 04:29 PM IST

ಮಂಗಳೂರು ಸ್ಫೋಟದ ರೂವಾರಿ  ಅಬ್ದುಲ್ ಮತೀನ್ ಎಂಬುದನ್ನು ಡಿಜಿಪಿ ಅಲೋಕ್ ಕುಮಾರ್ ಹೇಳೀಕೆ ನೀಡಿದ್ದಾರೆ. ಕಳೆದ ಮೂರು ವರ್ಷದಿಂದ ನಾಪತ್ತೆಯಾಗಿರುವ ಶಂಕಿತ ಉಗ್ರ ಮತೀನ್ ಅವರ ತಂದೆ ಮುನ್ಸೂರ್‌ ಖಾನ್‌ 26 ವರ್ಷ ಭಾರತೀಯ ಸೇನೆಯಲ್ಲಿದ್ದರು. ಎಂಜಿನಿಯರಿಂಗ್‌ ಓದಲು ಬೆಂಗಳೂರಿಗೆ ಹೋದವನಿಗೆ ಉಗ್ರ ನಂಟು ಬೆಳೆದಿತ್ತು.

ಮಂಗಳೂರು ಸ್ಫೋಟದ ರೂವಾರಿ  ಅಬ್ದುಲ್ ಮತೀನ್ ಎಂಬುದನ್ನು ಡಿಜಿಪಿ ಅಲೋಕ್ ಕುಮಾರ್ ಹೇಳೀಕೆ ನೀಡಿದ್ದಾರೆ. ಕಳೆದ ಮೂರು ವರ್ಷದಿಂದ ನಾಪತ್ತೆಯಾಗಿರುವ ಶಂಕಿತ ಉಗ್ರ ಮತೀನ್ ಅವರ ತಂದೆ ಮುನ್ಸೂರ್‌ ಖಾನ್‌ 26 ವರ್ಷ ಭಾರತೀಯ ಸೇನೆಯಲ್ಲಿದ್ದರು. ಎಂಜಿನಿಯರಿಂಗ್‌ ಓದಲು ಬೆಂಗಳೂರಿಗೆ ಹೋದವನಿಗೆ ಉಗ್ರ ನಂಟು ಬೆಳೆದಿತ್ತು. ಪುಣೆಯ ಉಗ್ರ ಅಡ್ಮಿನ್‌ ಅಗಿರೋ ವಾಟ್ಸಪ್‌ ಗ್ರೂಪ್‌ನಲ್ಲಿ ಶಾರೀಕ್‌ ಮತ್ತು ಮಾಜ್‌ ಮುನೀರ್‌ ಸಕ್ರಿಯರಾಗಿದ್ದರು. ಶಾರೀಕ್‌ ತೀರ್ಥಹಳ್ಳಿಯ ಸೊಪ್ಪುಗುಡ್ಡೆಯವನಾಗಿದ್ದು, ಮಾಜ್‌ ಮುನೀರ್‌ ಮತ್ತು ಮತಿನ್‌ ಕೂಡ ಈ ಪ್ರದೇಶವರಾಗಿದ್ದಾರೆ. ಎಲ್ಲರೂ ಸ್ನೇಹಿತರಾಗಿದ್ದರು. ಪುಣೆಯಲ್ಲಿರುವ ಉಗ್ರ ಸಂಘಟನೆ ಜೊತೆಗೆ ಮತಿನ್‌ ಸಂಪರ್ಕ ಇಟ್ಟುಕೊಂಡಿದ್ದು, ಈತ ಶಾರೀಕ್‌ನ ಬ್ರೈನ್‌ ವಾಶ್‌ ಮಾಡಿದ್ದ. 2019ರಲ್ಲಿ ತಮಿಳುನಾಡಿನ ಹಿಂದೂ ನಾಯಕನ ಹತ್ಯೆ ಕೇಸ್‌ನ ಆರೋಪಿಗಳ ಜೊತೆ ಇವರಿಗೆ ನಂಟು ಬೆಳೆದಿದ್ದು, 2019ರಲ್ಲಿ ಬೆಂಗಳೂರಿನಲ್ಲಿ ನಡೆದ ಐಸಿಸ್‌ ಸಭೆಗಳಲ್ಲೂ ಮತೀನ್‌ ಭಾಗಿಯಾಗಿದ್ದ. ಆಷ್ಘಾನ್‌, ಸಿರಿಯಾದಲ್ಲಿ ಐಸಿಸ್‌ ಸೇರಲು ಮುಸ್ಲಿಂ ಯುವಕರಿಗೆ ಪ್ರಚೋದನೆ ನೀಡುತ್ತಿದ್ದ ಎನ್ನಲಾಗಿದೆ. ತನ್ನ ಊರಿನ ಯುವಕರನ್ನು ಕೂಡ ಐಸಿಸ್‌ನತ್ತ ಸೆಳೆಯಲು ಯತ್ನಿಸುತ್ತಿದ್ದ. ಇದೇ ರೀತಿ ಶಾರೀಕ್‌ನ ತಲೆ ಕೆಡಿಸಿದ್ದ ಎನ್ನಲಾಗುತ್ತಿದೆ. 2019ರಿಂದ ನಾಪತ್ತೆಯಾಗಿರೋ ಮತೀನ್‌ಗಾಗಿ ಎನ್‌ಐಎ .3 ಲಕ್ಷ ಬಹುಮಾನ ಘೋಷಿಸಿದೆ ಎಂಬುದು ಗಮನಿಸಬೇಕು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!