Mangaluru blast case: ಅಪ್ಪ ದೇಶ ಕಾಯೋ ಸೈನಿಕ, ಮಗ ಉಗ್ರ! ಅಬ್ದುಲ್ ಮತೀನ್‌ಗೆ ಟೆರರ್ ನಂಟು ಬೆಳೆದಿದ್ದೆಲ್ಲಿ?

Mangaluru blast case: ಅಪ್ಪ ದೇಶ ಕಾಯೋ ಸೈನಿಕ, ಮಗ ಉಗ್ರ! ಅಬ್ದುಲ್ ಮತೀನ್‌ಗೆ ಟೆರರ್ ನಂಟು ಬೆಳೆದಿದ್ದೆಲ್ಲಿ?

Published : Nov 22, 2022, 04:29 PM IST

ಮಂಗಳೂರು ಸ್ಫೋಟದ ರೂವಾರಿ  ಅಬ್ದುಲ್ ಮತೀನ್ ಎಂಬುದನ್ನು ಡಿಜಿಪಿ ಅಲೋಕ್ ಕುಮಾರ್ ಹೇಳೀಕೆ ನೀಡಿದ್ದಾರೆ. ಕಳೆದ ಮೂರು ವರ್ಷದಿಂದ ನಾಪತ್ತೆಯಾಗಿರುವ ಶಂಕಿತ ಉಗ್ರ ಮತೀನ್ ಅವರ ತಂದೆ ಮುನ್ಸೂರ್‌ ಖಾನ್‌ 26 ವರ್ಷ ಭಾರತೀಯ ಸೇನೆಯಲ್ಲಿದ್ದರು. ಎಂಜಿನಿಯರಿಂಗ್‌ ಓದಲು ಬೆಂಗಳೂರಿಗೆ ಹೋದವನಿಗೆ ಉಗ್ರ ನಂಟು ಬೆಳೆದಿತ್ತು.

ಮಂಗಳೂರು ಸ್ಫೋಟದ ರೂವಾರಿ  ಅಬ್ದುಲ್ ಮತೀನ್ ಎಂಬುದನ್ನು ಡಿಜಿಪಿ ಅಲೋಕ್ ಕುಮಾರ್ ಹೇಳೀಕೆ ನೀಡಿದ್ದಾರೆ. ಕಳೆದ ಮೂರು ವರ್ಷದಿಂದ ನಾಪತ್ತೆಯಾಗಿರುವ ಶಂಕಿತ ಉಗ್ರ ಮತೀನ್ ಅವರ ತಂದೆ ಮುನ್ಸೂರ್‌ ಖಾನ್‌ 26 ವರ್ಷ ಭಾರತೀಯ ಸೇನೆಯಲ್ಲಿದ್ದರು. ಎಂಜಿನಿಯರಿಂಗ್‌ ಓದಲು ಬೆಂಗಳೂರಿಗೆ ಹೋದವನಿಗೆ ಉಗ್ರ ನಂಟು ಬೆಳೆದಿತ್ತು. ಪುಣೆಯ ಉಗ್ರ ಅಡ್ಮಿನ್‌ ಅಗಿರೋ ವಾಟ್ಸಪ್‌ ಗ್ರೂಪ್‌ನಲ್ಲಿ ಶಾರೀಕ್‌ ಮತ್ತು ಮಾಜ್‌ ಮುನೀರ್‌ ಸಕ್ರಿಯರಾಗಿದ್ದರು. ಶಾರೀಕ್‌ ತೀರ್ಥಹಳ್ಳಿಯ ಸೊಪ್ಪುಗುಡ್ಡೆಯವನಾಗಿದ್ದು, ಮಾಜ್‌ ಮುನೀರ್‌ ಮತ್ತು ಮತಿನ್‌ ಕೂಡ ಈ ಪ್ರದೇಶವರಾಗಿದ್ದಾರೆ. ಎಲ್ಲರೂ ಸ್ನೇಹಿತರಾಗಿದ್ದರು. ಪುಣೆಯಲ್ಲಿರುವ ಉಗ್ರ ಸಂಘಟನೆ ಜೊತೆಗೆ ಮತಿನ್‌ ಸಂಪರ್ಕ ಇಟ್ಟುಕೊಂಡಿದ್ದು, ಈತ ಶಾರೀಕ್‌ನ ಬ್ರೈನ್‌ ವಾಶ್‌ ಮಾಡಿದ್ದ. 2019ರಲ್ಲಿ ತಮಿಳುನಾಡಿನ ಹಿಂದೂ ನಾಯಕನ ಹತ್ಯೆ ಕೇಸ್‌ನ ಆರೋಪಿಗಳ ಜೊತೆ ಇವರಿಗೆ ನಂಟು ಬೆಳೆದಿದ್ದು, 2019ರಲ್ಲಿ ಬೆಂಗಳೂರಿನಲ್ಲಿ ನಡೆದ ಐಸಿಸ್‌ ಸಭೆಗಳಲ್ಲೂ ಮತೀನ್‌ ಭಾಗಿಯಾಗಿದ್ದ. ಆಷ್ಘಾನ್‌, ಸಿರಿಯಾದಲ್ಲಿ ಐಸಿಸ್‌ ಸೇರಲು ಮುಸ್ಲಿಂ ಯುವಕರಿಗೆ ಪ್ರಚೋದನೆ ನೀಡುತ್ತಿದ್ದ ಎನ್ನಲಾಗಿದೆ. ತನ್ನ ಊರಿನ ಯುವಕರನ್ನು ಕೂಡ ಐಸಿಸ್‌ನತ್ತ ಸೆಳೆಯಲು ಯತ್ನಿಸುತ್ತಿದ್ದ. ಇದೇ ರೀತಿ ಶಾರೀಕ್‌ನ ತಲೆ ಕೆಡಿಸಿದ್ದ ಎನ್ನಲಾಗುತ್ತಿದೆ. 2019ರಿಂದ ನಾಪತ್ತೆಯಾಗಿರೋ ಮತೀನ್‌ಗಾಗಿ ಎನ್‌ಐಎ .3 ಲಕ್ಷ ಬಹುಮಾನ ಘೋಷಿಸಿದೆ ಎಂಬುದು ಗಮನಿಸಬೇಕು.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್