ಮರಾಠ ಅಭಿವೃದ್ಧಿ ಪ್ರಾಧಿಕಾರದ ಹೆಸರು ಬದಲಿಸಿದ ಸರ್ಕಾರ

Nov 18, 2020, 2:20 PM IST

ಬೆಂಗಳೂರು, (ನ.18): ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 'ಮರಾಠ ಅಭಿವೃದ್ಧಿ ಪ್ರಾಧಿಕಾರ' ರಚನೆ ಮಾಡಲು ಒಪ್ಪಿಗೆ ನೀಡಿರುವುದು  ಚರ್ಚೆಗೆ ಕಾರಣವಾಗಿದೆ. ಸರ್ಕಾರದ ನಿರ್ಧಾರದ ವಿರುದ್ಧ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ಮರಾಠಾ ಪ್ರಾಧಿಕಾರ ರಚನೆಗೆ ವಿರೋಧ: ಡಿಸಂಬರ್ 5 ರಂದು ಕರ್ನಾಟಕ ಬಂದ್‌ಗೆ ಕರೆ

ಇನ್ನು ಕನ್ನಡ ಪರ ಸಂಘಟನೆಗಳು ಸರ್ಕಾರ ತನ್ನ ತೀರ್ಮಾನವನ್ನು ವಾಪಸ್ ಪಡೆಯದಿದ್ದರೆ ಡಿಸೆಂಬರ್ 5ರಂದು ಕರ್ನಾಟಕ ಬಂದ್ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ತನ್ನ ನಿರ್ಧಾರವನ್ನು ಬದಲಿಸಿದೆ.