ಕಾವೇರಿ ಸಂಘರ್ಷಕ್ಕೆ ಇಂದು ನಿರ್ಣಾಯಕ ದಿನ: ಕಾವೇರಿ ನಿಯಂತ್ರಣಾ ಸಮಿತಿಯಿಂದ ಹೈವೋಲ್ಟೇಜ್ ಸಭೆ

ಕಾವೇರಿ ಸಂಘರ್ಷಕ್ಕೆ ಇಂದು ನಿರ್ಣಾಯಕ ದಿನ: ಕಾವೇರಿ ನಿಯಂತ್ರಣಾ ಸಮಿತಿಯಿಂದ ಹೈವೋಲ್ಟೇಜ್ ಸಭೆ

Published : Aug 28, 2023, 10:28 AM IST

ಕಾವೇರಿ ಬೇಕೇ ಬೇಕು ಎಂದು ಸುಪ್ರೀಂ ಮೆಟ್ಟಿಲೇರಿದ್ದ ತಮಿಳುನಾಡಿಗೆ, ಕಾವೇರಿ ಪ್ರಾಧಿಕಾರದ ಮೊರೆ ಹೋಗುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆ ನಾಳೆ ಕಾವೇರಿ ನಿಯಂತ್ರಣ ಸಮಿತಿಯ ಮಹತ್ವದ ಸಭೆ ನಡೆಯಲಿದ್ದು, ತಮಿಳುನಾಡಿಗೆ ನೀರು ಹರಿಸಬೇಕಾ, ಬೇಡವಾ ಎಂದು ನಾಳೆ ನಿರ್ಧಾರವಾಗಲಿದೆ.
 

ಕರ್ನಾಟಕ-ತಮಿಳುನಾಡಿನ ನೀರಿನ ಸಂಘರ್ಷ ಸುಪ್ರೀಂಕೋರ್ಟ್(Supreme Court) ಮೆಟ್ಟಿಲೇರಿದೆ. ಕಾವೇರಿ ಪ್ರಾಧಿಕಾರದ ಆದೇಶವನ್ನು ಕರ್ನಾಟಕ ಪಾಲಿಸುತ್ತಿಲ್ಲ ನೀವೇ ನೀರು ಬಿಡುಗಡೆ ಬಗ್ಗೆ ಆದೇಶಿಸಿ ಎಂದು ತಮಿಳುನಾಡು(Tamilnadu) ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಆದ್ರೆ, ನೀರು ಬಿಡುಗಡೆಗೆ ಆದೇಶಿಸಲು  ಸಾಧ್ಯವಿಲ್ಲ ಎಂದು ತಮಿಳುನಾಡಿಗೆ ಸ್ಪಷ್ಟ ಸಂದೇಶ ರವಾನಿಸಿದ ಕೋರ್ಟ್ ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಹೋಗುವಂತೆ ಪರೋಕ್ಷ ಸೂಚನೆ ನೀಡಿತ್ತು. ಜೊತೆ ಜೊತೆಗೆ ಸಭೆ ನಡೆಸಿ ಶುಕ್ರವಾರದ ಒಳಗೆ ವರದಿ ನೀಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸುಪ್ರೀಂಕೋಟ್ ಸೂಚನೆ ನೀಡಿತ್ತು. ಇದರ ಬೆನ್ನಲ್ಲೇ ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಸಭೆ  ನಡೆಯಲಿದೆ. ನ್ಯಾ ಬಿ.ಆರ್. ಗವಾಯಿ ನೇತೃತ್ವದ ಸುಪ್ರೀಂ ತ್ರಿಸದಸ್ಯ ಪೀಠ, ನೀರು ಹಂಚಿಕೆಯಲ್ಲಿ ವ್ಯತ್ಯಾಸವಾಗಿದೆಯೇ, ಇಲ್ಲವೇ ಎಂಬುದನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಪರಿಶೀಲಿಸಿ ವರದಿ ನೀಡಲು ಸೂಚಿಸಿದೆ. ಅದರಂತೆ ಇಂದು ನಡೆಯುತ್ತಿರುವ ಸಭೆ ಎರಡೂ ರಾಜ್ಯಗಳ ಟೆನ್ಷನ್ ಹೆಚ್ಚಿಸಿದೆ.

ಇದನ್ನೂ ವೀಕ್ಷಿಸಿ:  ಆ ಪ್ರಶಸ್ತಿಗಾಗಿ ಗುರಿ ಇಟ್ಟ ಕೆಜಿಎಫ್ 'ಕಿರಾತಕ': ಯಶ್19 ಸಿನಿಮಾ ಲೇಟ್ ಆಗೋಕೆ ಇದೇ ಕಾರಣನಾ ?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more