ಚಿಕ್ಕಬಳ್ಳಾಪುರ ಆರೋಗ್ಯ ಮೇಳ ವಿಶ್ವದಾಖಲೆ, ಒಂದೂವರೆ ಲಕ್ಷ ಜನರಿಗೆ ಆರೋಗ್ಯ ತಪಾಸಣೆ, ಚಿಕಿತ್ಸೆ

ಚಿಕ್ಕಬಳ್ಳಾಪುರ ಆರೋಗ್ಯ ಮೇಳ ವಿಶ್ವದಾಖಲೆ, ಒಂದೂವರೆ ಲಕ್ಷ ಜನರಿಗೆ ಆರೋಗ್ಯ ತಪಾಸಣೆ, ಚಿಕಿತ್ಸೆ

Published : May 15, 2022, 11:54 AM ISTUpdated : May 15, 2022, 05:41 PM IST

 ಚಿಕ್ಕಬಳ್ಳಾಪುರ ನಗರದಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ ಡಾ.ಕೆ.ಸುಧಾಕರ್‌ ಫೌಂಡೇಷನ್‌ ಶನಿವಾರದಿಂದ ಆಯೋಜಿಸಿರುವ ಎರಡು ದಿನಗಳ ಮೆಗಾ ಆರೋಗ್ಯ ಮೇಳ ಹೊಸ ವಿಶ್ವದಾಖಲೆ ಬರೆದಿದೆ. 2 ಲಕ್ಷಕ್ಕೂ ಅಧಿಕ ಮಂದಿ ಆರೋಗ್ಯ ತಪಾಸಣೆಗೊಳಗಾಗುವ ಮೂಲಕ ಲಂಡನ್‌ ವಲ್ಡ್‌ರ್‍ ಬುಕ್‌ ಆಫ್‌ ರೆಕಾರ್ಡ್ಸ್ಗೆ ಈ ಮೇಳ ಸೇರ್ಪಡೆಯಾಗಿದೆ.

 ಚಿಕ್ಕಬಳ್ಳಾಪುರ (ಮೇ. 15): ಚಿಕ್ಕಬಳ್ಳಾಪುರ ನಗರದಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ ಡಾ.ಕೆ.ಸುಧಾಕರ್‌ ¶ೌಂಡೇಷನ್‌ ಶನಿವಾರದಿಂದ ಆಯೋಜಿಸಿರುವ ಎರಡು ದಿನಗಳ ಮೆಗಾ ಆರೋಗ್ಯ ಮೇಳ ಹೊಸ ವಿಶ್ವದಾಖಲೆ ಬರೆದಿದೆ. 2 ಲಕ್ಷಕ್ಕೂ ಅಧಿಕ ಮಂದಿ ಆರೋಗ್ಯ ತಪಾಸಣೆಗೊಳಗಾಗುವ ಮೂಲಕ ಲಂಡನ್‌ ವಲ್ಡ್‌ರ್‍ ಬುಕ್‌ ಆಫ್‌ ರೆಕಾರ್ಡ್ಸ್ಗೆ ಈ ಮೇಳ ಸೇರ್ಪಡೆಯಾಗಿದೆ.

ಬೃಹತ್‌ ಆರೋಗ್ಯ ಶಿಬಿರಕ್ಕೆ ಆನ್‌ಲೈನ್‌ನಲ್ಲಿ ನೋಂದಣಿ ವ್ಯವಸ್ಥೆ ಮಾಡಲಾಗಿತ್ತು. 14 ಖಾಸಗಿ ವೈದ್ಯಕೀಯ ಕಾಲೇಜು, 20 ಖಾಸಗಿ ಆಸ್ಪತ್ರೆ, 12 ಕಣ್ಣಿನ ಆಸ್ಪತ್ರೆಗಳೂ ಸೇರಿದಂತೆ ಹಲವು ಸಂಸ್ಥೆಗಳ ವೈದ್ಯಕೀಯ ಸಿಬ್ಬಂದಿ ಭಾಗವಹಿಸಿದ್ದರು. ಸಾವಿರಾರು ವೈದ್ಯರು, ನರ್ಸ್‌ಗಳು, ಪ್ಯಾರಾ ಮೆಡಿಕಲ್‌ ಸಿಬ್ಬಂದಿ, ವಿಶೇಷ ತಜ್ಞರು ಸೇರಿದಂತೆ 5000ಕ್ಕೂ ಅಧಿಕ ವೈದ್ಯಕೀಯ ಸಿಬ್ಬಂದಿ ಪಾಲ್ಗೊಂಡು ಜನತೆಗೆ ಬೆಳಗ್ಗೆಯಿಂದ ಸಂಜೆಯವರೆಗೂ ತಾಳ್ಮೆಯಿಂದ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಇದ್ದವರಿಗೆ ಸ್ಥಳದಲ್ಲಿಯೇ ಉಚಿತವಾಗಿ ವೈದ್ಯೋಪಚಾರ ನೀಡಿ ಔಷಧಗಳನ್ನು ವಿತರಿಸಿದರು.

ಚಿಕ್ಕಬಳ್ಳಾಪುರ ಬೃಹತ್‌ ಆರೋಗ್ಯ ಮೇಳಕ್ಕೆ ಆನ್‌ಲೈನ್‌ನಲ್ಲೇ 1.50 ಲಕ್ಷ ನೋಂದಣಿಯಾಗಿದೆ ಎಂಬುದು ಅಚ್ಚರಿಯ ಸಂಗತಿ ಎಂದು ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ರಾಜ್ಯದಲ್ಲಿ ನಡೆದ ಆರೋಗ್ಯ ಮೇಳಗಳಲ್ಲಿ ಇದುವರೆಗೂ 73 ಸಾವಿರ ಮಂದಿ ನೋಂದಣಿ ಆಗಿದ್ದು ಈವರೆಗಿನ ದಾಖಲೆಯಾಗಿತ್ತು. ಇದೀಗ ಚಿಕ್ಕಬಳ್ಳಾಪುರ ಆರೋಗ್ಯ ಮೇಳದಲ್ಲಿ ಮೊದಲ ದಿನವೇ 2 ಲಕ್ಷಕ್ಕೂ ಅಧಿಕ ಮಂದಿ ತಪಾಸಣೆಗೊಳಗಾಗಿದ್ದಾರೆ. ಎರಡನೇ ದಿನವೂ ದೊಡ್ಡ ಪ್ರಮಾಣದಲ್ಲಿ ಜನ ಆಗಮಿಸುವ ನಿರೀಕ್ಷೆಯಿದೆ.

23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
Read more