Mekedatu Padayatre: ಕಾನೂನು ಉಲ್ಲಂಘಿಸಿದರೆ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ: ಸಿಎಂ

Jan 10, 2022, 1:26 PM IST

ಬೆಂಗಳೂರು (ಜ. 10):  ಮೇಕೆದಾಟು ಅಣೆಕಟ್ಟಿಗಾಗಿ (Mekedatu Dam) ಆಗ್ರಹಿಸಿ ಕಾಂಗ್ರೆಸ್ ನಿನ್ನೆಯಿಂದ ಪಾದಯಾತ್ರೆ ಆರಂಭಿಸಿದೆ. ವೀಕೆಂಡ್ ಕರ್ಫ್ಯೂ ಇದ್ದರೂ, ಲೆಕ್ಕಿಸದೇ ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ ನೀಡಿದ್ದು, ಇಂದು 2 ನೇ ದಿನಕ್ಕೆ ಕಾಲಿಟ್ಟಿದೆ.

Mekedatu Padayatre: ವೀಕೆಂಡ್ ಕರ್ಫ್ಯೂ ಉಲ್ಲಂಘನೆ, ಸಿದ್ದರಾಮಯ್ಯ, ಡಿಕೆಶಿ ಸೇರಿ 30 ಮಂದಿ ಮೇಲೆ FIR

ಇದರ ನಡುವೆ ವೀಕೆಂಡ್‌ ಕರ್ಫ್ಯೂ ಉಲ್ಲಂಘಿಸಿದ್ದಕ್ಕೆ ಡಿಕೆಶಿ, ಸಿದ್ದರಾಮಯ್ಯ ಸೇರಿ 30 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 'ಕಾನೂನು ಉಲ್ಲಂಘಿಸಿದವರ ವಿರುದ್ಧ ಕೇಸ್ ಹಾಕಲಾಗಿದೆ. ಅವರೊಬ್ಬರೇ ಅಲ್ಲ, ಕಾನೂನು ಉಲ್ಲಂಘನೆ ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲವೆಂದು' ಸಿಎಂ ಬೊಮ್ಮಾಯಿ ಹೇಳಿದ್ಧಾರೆ.