ಮೇಕೆದಾಟು ಅಣೆಕಟ್ಟಿಗಾಗಿ (Mekedatu Padatre) ಆಗ್ರಹಿಸಿ ಕಾಂಗ್ರೆಸ್ ನಿನ್ನೆಯಿಂದ ಪಾದಯಾತ್ರೆ ಆರಂಭಿಸಿದೆ. ವೀಕೆಂಡ್ ಕರ್ಫ್ಯೂ ಇದ್ದರೂ, ಲೆಕ್ಕಿಸದೇ ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ ನೀಡಿದ್ದು, ಇಂದು 2 ನೇ ದಿನಕ್ಕೆ ಕಾಲಿಟ್ಟಿದೆ.
ಬೆಂಗಳೂರು (ಜ. 10): ಮೇಕೆದಾಟು ಅಣೆಕಟ್ಟಿಗಾಗಿ (Mekedatu Dam) ಆಗ್ರಹಿಸಿ ಕಾಂಗ್ರೆಸ್ ನಿನ್ನೆಯಿಂದ ಪಾದಯಾತ್ರೆ ಆರಂಭಿಸಿದೆ. ವೀಕೆಂಡ್ ಕರ್ಫ್ಯೂ ಇದ್ದರೂ, ಲೆಕ್ಕಿಸದೇ ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ ನೀಡಿದ್ದು, ಇಂದು 2 ನೇ ದಿನಕ್ಕೆ ಕಾಲಿಟ್ಟಿದೆ.
ಇಂದು ದೊಡ್ಡ ಆಲಹಳ್ಳಿಯಿಂದ ಕನಕಪುರದವರೆಗೆ ಕಾಂಗ್ರೆಸ್ ಪಾದಯಾತ್ರೆ ನಡೆಸಲಿದೆ. ಮಾದಪ್ಪನದೊಡ್ಡಿಯಲ್ಲಿ ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಇದರ ನಡುವೆ ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿದ್ದಕ್ಕೆ ಡಿಕೆಶಿ, ಸಿದ್ದರಾಮಯ್ಯ ಸೇರಿ 30 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿನ್ನೆ ಜ್ವರ, ಸುಸ್ತಿನ ಕಾರಣದಿಂದ ಸಿದ್ದರಾಮಯ್ಯ ಪಾದಯಾತ್ರೆಯನ್ನು ಅರ್ಧಕ್ಕೆ ನಿಲ್ಲಿಸಿದ್ದರು.