ಕರ್ನಾಟಕದಲ್ಲಿ ಮರಾಠಿಗರ ಮೇಲೆ ದೌರ್ಜನ್ಯ ನಡೀತಿದೆಯಂತೆ; ಎಂಇಎಸ್‌ ಮುಖಂಡರಿಂದ ಪತ್ರ!

ಕರ್ನಾಟಕದಲ್ಲಿ ಮರಾಠಿಗರ ಮೇಲೆ ದೌರ್ಜನ್ಯ ನಡೀತಿದೆಯಂತೆ; ಎಂಇಎಸ್‌ ಮುಖಂಡರಿಂದ ಪತ್ರ!

Published : Feb 27, 2025, 09:17 PM ISTUpdated : Feb 27, 2025, 10:19 PM IST

ಬೆಳಗಾವಿಯಲ್ಲಿ ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣವನ್ನು ಎಂಇಎಸ್ ಜೀವಂತವಾಗಿಡಲು ಪ್ರಯತ್ನಿಸುತ್ತಿದೆ. ಕಂಡಕ್ಟರ್ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ್ದನ್ನು ಮರೆಮಾಚಲು ಭಾಷಾ ವಿವಾದದ ಬಣ್ಣ ಬಳಿಯಲಾಗುತ್ತಿದೆ.

ಕಂಡಕ್ಟರ್‌ ಮೇಲೆ ಹಲ್ಲೆ ಪ್ರಕರಣ ವನ್ನು ಜೀವಂತವಾಗಿಡಲು ಎಂಇಎಸ್‌ ಮುಖಂಡರಿಂದ ಪ್ರಯತ್ನ ನಡೀತಿದೆ. ಕಂಡಕ್ಟರ್‌ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ್ದು, ಅದನ್ನ ಮರೆಮಾಚಲು ಪ್ರಕರಣಕ್ಕೆ ಭಾಷಾ ವಿವಾದದ ಬಣ್ಣ ಬಳಿಯಲಾಗಿದೆ. ಬೆಳಗಾವಿಯಲ್ಲಿ ಪರಾಠಿಗಳ ಮೇಲೆ ದೌರ್ಜನ್ಯ ನಡೀತಿದೆ ಎಂದು ಎಂಇಎಸ್‌ ನಾಯಕರು ಶಿವಸೇನೆ ಉದ್ಧವ್‌ ಠಾಕ್ರೆಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿ ಭಾಷೆ ವಿಚಾರಕ್ಕೆ ಗಲಾಟೆ ಆಗಿರುವುದನ್ನು ಎಂಇಎಸ್ ಮುಖಂಡರು ಜೀವಂತವಾಗಿ ಇಡುವುದಕ್ಕೆ ಹಲವು ಕಸರತ್ತುಗಳನ್ನು ಮಾಡುತ್ತಿದೆ. ಈ ಬಗ್ಗೆ ಎಂಇಎಸ್ ಮುಖಂಡ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಳಿ ಪತ್ರದ ಮೂಲಕ ದೂರು ನೀಡಿದ್ದಾರೆ. ಜೊತೆಗೆ, ಕರ್ನಾಟಕದಲ್ಲಿ ಮರಾಠಿ ಭಾಷಿಕರ ಮೇಲೆ ಕನ್ನಡಿಗರು ಭಾರೀ ದೌರ್ಜನ್ಯವನ್ನು ಮಾಡುತ್ತಿವೆ ಎಂದು ಹೇಳಿದ್ದಾರೆ. ಜೊತೆಗೆ, ಮರಾಠಿ ಮಾತನಾಡುವ ಬಾಲಕಿ ಮೇಲೆ ಕಂಡಕ್ಟರ್ ಅನುಚಿತವಾಗಿ ನಡೆದುಕೊಂಡು, ಅದನ್ನು ಮುಚ್ಚಿ ಹಾಕಲು ಭಾಷೆಯನ್ನು ಎತ್ತಿಕಟ್ಟಿದ್ದಾರೆ ಎಂದು ಹೇಳಿದ್ದಾರೆ.

ಈ ಮೂಲಕ ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವೆ ಗಡಿ ವಿವಾದವನ್ನು ಇಟ್ಟುಕೊಂಡು ಶಿವಸೇನೆ ಹಾಗೂ ಎಂಇಎಸ್ ಮಹಾರಾಷ್ಟ್ರದಲ್ಲಿ ರಾಜಕಾರಣ ಮಾಡುತ್ತಿವೆ. ಇದೀಗ ಕಂಡಕ್ಟರ್ ಪ್ರಕರಣವನ್ನು ಜೀವಂತವಾಗಿ ಇಟ್ಟು ಹೋರಾಟ ಮುಂದುವರೆಸಲು ಮುಂದಾಗಿವೆ. ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲಿಸಿದ್ದ ಯುವತಿ ಹಾಗೂ ಅವರ ಮನೆಯವರೇ ದೂರನ್ನು ವಾಪಸ್ ಪಡೆದುಕೊಂಡಿದ್ದು ಬಿ ರಿಪೋರ್ಟ್ ಸಲ್ಲಿಕೆ ಮಾಡಲಾಗಿದೆ. ಆದರೂ, ಈ ಪ್ರಕರಣ ಜೀವಂತವಾಗಿ ಇಟ್ಟುಕೊಂಡು ಸ್ಥಳೀಯ ಪಂಚಾಯತ್ ಚುನಾವಣೆ ರಾಜಕಾರಣ ಮಾಡಲು ಮುಂದಾಗಿವೆ ಎಂದು ತಿಳಿದುಬಂದಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more