ಪಕ್ಷಾಂತರ ಸಂಚಲನ: ಕಾಂಗ್ರೆಸ್‌ಗೆ ಹೋಗಲ್ಲ, ಅಲ್ಲಿಂದಲೇ ಬರ್ತಾರೆ: ಆನಂದ್ ಸಿಂಗ್

Jan 26, 2022, 5:26 PM IST

ಬೆಂಗಳೂರು (ಜ. 26):  ಜೆಡಿಎಸ್‌ ಮತ್ತು ಬಿಜೆಪಿ ಶಾಸಕರು ಕಾಂಗ್ರೆಸ್‌ ಸಂಪರ್ಕದಲ್ಲಿರುವುದು ನಿಜ. ಆದರೆ ಅವರ ಹೆಸರನ್ನು ಮಾತ್ರ ಈಗ ಹೇಳುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಅಲ್ಲದೆ, ಯಾವುದೇ ಷರತ್ತು ಇಲ್ಲದೆ ಪಕ್ಷ ಸೇರ್ಪಡೆಯಾಗುವುದಾದರೆ ಸ್ವಾಗತ ಎಂದೂ ಹೇಳಿದ್ದಾರೆ. 

'ಪಕ್ಷ ಬಿಟ್ಟು ಹೋದವರನ್ನು ಸೇರಿಸಿಕೊಳ್ಳಲ್ಲ, ನಾನೆಲ್ರಿ ಹಾಗಂದೆ.'? ಸಿದ್ದರಾಮಯ್ಯ

'ಇದಕ್ಕೆಲ್ಲಾ ನಾನು ರಿಯಾಕ್ಟ್ ಮಾಡಲ್ಲ. ಬಿಜೆಪಿಯಿಂದ ಯಾರೂ ಕಾಂಗ್ರೆಸ್‌ಗೆ ಹೋಗಲ್ಲ. ಕಾಂಗ್ರೆಸ್‌ನ ಪರಿಸ್ಥಿತಿ ಎಲ್ಲರಿಗೂ ಗೊತ್ತಿದೆ. ಹಾಗಿರುವಾಗ ಯಾರ್ರಿ ಕಾಂಗ್ರೆಸ್‌ಗೆ ಹೋಗ್ತಾರೆ.? ನಮ್ಮ ಪಕ್ಷಕ್ಕೆ ಬರ್ತಾರೆ ವಿನಃ ಅಲ್ಲಿಗೆ ಹೋಗಲ್ರೀ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.