Shivamogga: ಮಾನವೀಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ: ಗಾಯಾಳು ರಕ್ಷಣೆ

Shivamogga: ಮಾನವೀಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ: ಗಾಯಾಳು ರಕ್ಷಣೆ

Published : Mar 03, 2023, 08:39 PM IST

ತೀರ್ಥಹಳ್ಳಿ ತಾಲೂಕಿನ ಬೇಗುವಳ್ಳಿ ಸಮೀಪ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿ ಕೊಡುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ಮಾನವೀಯತೆ ಮೆರೆದಿದ್ದಾರೆ. 

ಶಿವಮೊಗ್ಗ (ಮಾ.03): ತೀರ್ಥಹಳ್ಳಿ ತಾಲೂಕಿನ ಬೇಗುವಳ್ಳಿ ಸಮೀಪ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿ ಕೊಡುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ಮಾನವೀಯತೆ ಮೆರೆದಿದ್ದಾರೆ. ರಸ್ತೆಯಲ್ಲಿ ಹಸು ಅಡ್ಡ ಬಂದ ಪರಿಣಾಮ, ಹಸುವಿಗೆ ಬೈಕ್ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಸವಾರ ಬಿದ್ದು ಗಂಭೀರ ಗಾಯಗೊಂಡಿದ್ದಾನೆ. ಗಾಯಗೊಂಡಿದ್ದ ಹಲಗ ಮನೋಜ್ (32) ಯುವಕನನ್ನು ಸಿಂಗನಬಿದರೆ ಹಳಗ ಗ್ರಾಮದ ನಿವಾಸಿ ಎನ್ನಲಾಗಿದೆ. ರಸ್ತೆ ಬದಿಯಲ್ಲಿ ಗಾಯಾಳು ಯುವಕ ನರಳುತ್ತಿದ್ದ. ಈ ವೇಳೆ ಅದೇ ಮಾರ್ಗದಲ್ಲಿ ಬೆಂಗಳೂರಿಗೆ ಹೊರಟಿದ್ದ ಸಚಿವ, ಗಾಯಾಳು ಯುವಕನನ್ನು ಗಮನಿಸಿ ತಮ್ಮ ವಾಹನ ನಿಲ್ಲಿಸಿದ್ದಾರೆ. ಗಾಯಾಳು ಯುವಕನನ್ನು ಉಪಚರಿಸಿ, ಧೈರ್ಯ ಹೇಳಿದ್ದಾರೆ. ಅಲ್ಲದೇ ತಮ್ಮ ಬೆಂಗಾವಲು ವಾಹನದಲ್ಲಿ ಗಾಯಾಳು ಯುವಕನನ್ನು ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ಇನ್ನು ಸಚಿವರ ಕಾಳಜಿಯನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more