ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿಯಾಗುತ್ತಾ ಎನ್ನುವ ಸುದ್ದಿಗೆ ಗೃಹ ಸಚಿವರ ಸ್ಪಷ್ಟನೆ

Mar 19, 2021, 4:47 PM IST

ಬೆಂಗಳೂರು, (ಮಾ.19): ರಾಜ್ಯಲ್ಲಿ ದಿನಕಳೆದಂತೆ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಕೊರೋನಾ 2ನೇ ಅಲೆ ಆರಂಭವಾಗುವ ಆತಂಕ ಶುರುವಾಗಿದೆ. ಈ ನಡುವಲ್ಲೇ ಪರಿಸ್ಥಿತಿ ಎದುರಿಸಲು ಸಜ್ಜಾಗುವಂತೆ ರಾಜ್ಯ ಸರ್ಕಾರ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಟ್ಟಿದೆ.

ಕೊರೋನಾ 2ನೇ ಅಲೆ ಭೀತಿ: ದೇವಸ್ಥಾನಗಳಲ್ಲಿ ಹೆಚ್ಚು ಜನ ಸೇರು​ವಂತಿ​ಲ್ಲ

ಇನ್ನು ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಹಾಗೂ ನೈಟ್ ಕರ್ಫ್ಯೂ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ಕೊಟ್ಟಿದ್ದಾರೆ.