ಕೆಇಎ ಬಳಿ ಕಾದು ಕುಳಿತಿದ್ದ ವಿದ್ಯಾರ್ಥಿಗಳಿಗೆ ಸರ್‌ಪ್ರೈಸ್‌: ಸಮಸ್ಯೆ ಆಲಿಸಿದ ಸಚಿವ ಎಂ.ಸಿ. ಸುಧಾಕರ್‌

ಕೆಇಎ ಬಳಿ ಕಾದು ಕುಳಿತಿದ್ದ ವಿದ್ಯಾರ್ಥಿಗಳಿಗೆ ಸರ್‌ಪ್ರೈಸ್‌: ಸಮಸ್ಯೆ ಆಲಿಸಿದ ಸಚಿವ ಎಂ.ಸಿ. ಸುಧಾಕರ್‌

Published : Oct 14, 2023, 10:53 AM IST

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಂದೆ ತಮ್ಮ ಸಮಸ್ಯೆಯ ಬುತ್ತಿ ಹೊತ್ತು ಪರಿಹಾರ ಸಿಗಬಹುದು ಅನ್ನುವ ನಿರೀಕ್ಷೆಯ ಮೇರೆಗೆ ನಿತ್ಯ ಸಾವಿರಾರು ವಿದ್ಯಾರ್ಥಿಗಳು ಸೇರುತ್ತಲೇ ಇರ್ತಾರೆ. ಆದ್ರೆ ನಿನ್ನೆ KEA ಗೇಟ್ ಬಳಿ ಕಾದು ಕುಳಿತಿದ್ದ ವಿದ್ಯಾರ್ಥಿಗಳಿಗೆ ಸರ್ಪ್ರೈಸ್ ಒಂದು ಕಾದಿತ್ತು. ಆ ಸರ್ಪ್ರೈಸ್ ಏನು ಗೊತ್ತಾ? 
 

ಬೆಂಗಳೂರು ಮಾತ್ರವಲ್ಲ , ರಾಜ್ಯದ ಮೂಲೆ ಮೂಲೆಯಿಂದ ವಿದ್ಯಾರ್ಥಿಗಳು(Students) ಸಮಸ್ಯೆಗಳ ಪಟ್ಟಿ ಹೊತ್ತು ಪ್ರಾಧಿಕಾರದ ಮುಂದೆ ಬಂದಿದ್ದಾರೆ. ಇದು ಪ್ರತಿನಿತ್ಯವೂ KEA ಮುಂದೆ ಕಾಣಸಿಗುವ ದೃಶ್ಯ. ಹತ್ತಾರು ಸಮಸ್ಯೆ ಹೊತ್ತು ಬರುವ ಇವರಿಗೆ ನಿತ್ಯ  ಯಾವುದೇ ಉತ್ತರ ಸಿಗದೆ ನಿರಾಸೆ ಆಗ್ತಾ ಇತ್ತು. ಆದ್ರೆ ನಿನ್ನೆ ಖುದ್ದು ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್(Minister Dr. MC Sudhakar) KEA ಗೆ ಭೇಟಿ ನೀಡಿ ಇವರ ಅಹವಾಲು ಆಲಿಸಿದ್ರು. ಬೆಳಿಗ್ಗೆ 10.30ಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಬಂದ ಸಚಿವರು ಮಧ್ಯಾಹ್ನ 2 ಗಂಟೆಯವರೆಗೂ ಸ್ಥಳದಲ್ಲೇ ಇದ್ದು ಸಮಸ್ಯೆ ಅಲಿಸಿದ್ರು. ಮೆಡಿಕಲ್, ಇಂಜಿನಿಯರಿಂಗ್ ಏಕಕಾಲಕ್ಕೆ ಕೌನ್ಸೆಲಿಂಗ್ ಆರಂಭ ಮಾಡಲಾಗಿತ್ತು. ಆದ್ರೆ  ರಿಜಿಸ್ಟ್ರೇಷನ್ ಪ್ರಕ್ರಿಯೆಯಲ್ಲಿ ಹಲವು ವಿದ್ಯಾರ್ಥಿಗಳು ತಪ್ಪು ಮಾಡಿದ್ದರು. ಸೀಟ್ ಅಲಾಟ್ ಆದ ಮೇಲೆ ಆ ಕಾಲೇಜು ಬೇಡ ಈ ಕಾಲೇಜು ಬೇಡ ಎಂದರೆ.. ಮತ್ತೆ ಕೆಲವರು ತಮಗೆ ಅಲಾಟ್ ಆಗಿರುವ ಸೀಟ್ ಬೇಡ ಹಣ ವಾಪಾಸ್ ಕೊಡಿ ಎನ್ನುವ ಬೆಡಿಕೆ ಇಟ್ಟಿದ್ದಾರೆ. ಇದೆಲ್ಲ ಸಮಸ್ಯೆಗಳನ್ನೂ ಸಚಿವರು ಆಲಿಸಿದ್ರು. ಆದ್ರೆ ಸಮಸ್ಯೆಗೆ ಸಚಿವರು ಕೂಡ ಪರಿಹಾರ ಕೊಡುವ ಬಗ್ಗೆ ಮೌನ ಮುರಿಯಲಿಲ್ಲ.. ಬದಲಾಗಿ ಹೆಚ್ಚುವರಿ ಸೀಟ್ ಕೆಲವೊಂದು ಕಾಂಬಿನೇಷನ್ಲ್ಲಿ ಉಳಿದು ಕೊಂಡಿದೆ ಅಂತ ಬೇಸರ ವ್ಯಕ್ತಪಡಿಸಿದರು.ಇನ್ನು ವಿದ್ಯಾರ್ಥಿಗಳಿಗೆ, ಪೋಷಕರಿಗೆ ದೊಡ್ಡ ತಲೆನೋವಾಗಿದ್ದು 5 ಟೈಮ್ ಪೆನಾಲ್ಟಿ ವಿಚಾರ. ಅಂದ್ರೆ ಒಬ್ಬ ವಿದ್ಯಾರ್ಥಿ ಯಾವುದಾದರೂ ಕಾಲೇಜು ಆಯ್ಕೆ ಮಾಡಿಕೊಂಡಾಗ , ವಿದ್ಯಾರ್ಥಿಗೆ ಆ ಕಾಲೇಜು ಹಿಡಿಸದೇ ಹೋದ್ರೆ ಮತ್ತೆ ಆ ಸೀಟು ಕೈ ಬಿಡುವ ಆಯ್ಕೆಯನ್ನು ಉನ್ನತ ಶಿಕ್ಷಣ ಇಲಾಖೆ ಕೊಟ್ಟಿಲ್ಲ. ಒಂದೊಮ್ಮೆ ವಿದ್ಯಾರ್ಥಿ ಕಾಲೇಜು ಬದಲಾವಣೆ ಮಾಡಲೇ ಬೇಕಾದ್ರೆ 5 ಸಲ ಆ ಕೋರ್ಸ್ಗೆ ಪೆನಾಲ್ಟಿ ಕಟ್ಟಬೇಕಾಗುತ್ತದೆ.. ಇದು ಪೋಷಕರ ಕೆಂಗಣ್ಣಿಗೆ ಕಾರಣ ಆಗಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಅರಿವು ಮೂಡಿಸುವ ಕೆಲಸ ಮಾಡ್ತೀವಿ ಅಂತಾ ಸಚಿವರು ಸಮಜಾಯಿಷಿ ನೀಡಿದ್ರಂತೆ. 

ಇದನ್ನೂ ವೀಕ್ಷಿಸಿ:  ಮಂಗಳೂರು ದಸರಾದಲ್ಲಿ ದೈವಗಳ ಸ್ತಬ್ಧಚಿತ್ರಕ್ಕೆ ಬ್ರೇಕ್: ಡಿಜೆಗೆ ನಿಷೇಧ.. ಭಜನಾ ತಂಡಗಳಿಗೆ ಅವಕಾಶ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more