Jul 28, 2020, 5:53 PM IST
ಬೆಂಗಳೂರು (ಜು. 28): ಸಚಿವ ಡಾ. ಸುಧಾಕರ್ ಆಪ್ತ ಸಹಾಯಕನಿಗೆ ಕೊರೊನಾ ದೃಢಪಟ್ಟಿದ್ದು ಸುಧಾಕರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. 'ನಾನು ಸೋಂಕಿತನ ಪ್ರಾಥಮಿಕ ಸಂಪರ್ಕ ಹೊಂದಿಲ್ಲ. ನಾನು ಕ್ವಾರಂಟೈನ್ ಆಗುವ ಅಗತ್ಯವಿಲ್ಲ ಎಂದು ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
'ಆಪ್ತ ಸಹಾಯಕನಿಗೆ ಕೊರೊನಾ ಸೋಂಕು ತಗುಲಿದ್ದು ಮತ್ತೊಮ್ಮೆ ನಾನು ಕ್ವಾರಂಟೈನ್ ಅಗಬೇಕಾಗಿದೆ ಎಂದು ಮಾಧ್ಯಮಗಳ ವರದಿ ಗಮನಿಸಿದ್ದೇನೆ. ನಾನು ಸೋಂಕಿತ ವ್ಯಕ್ತಿಯ ಸಂಪರ್ಕ ಹೊಂದಿಲ್ಲ. ಹಾಗಾಗಿ ಕ್ವಾರಂಟೈನ್ ಆಗುವ ಅಗತ್ಯವಿಲ್ಲ' ಎಂದಿದ್ದಾರೆ.
ಆಪ್ತ ಸಿಬ್ಬಂದಿಗೆ ಕೋವಿಡ್ ದೃಢ; ಸಚಿವ ಎಸ್ ಟಿ ಸೋಮಶೇಖರ್ ಹೋಂ ಕ್ವಾರಂಟೈನ್