ರ‌್ಯಾಸ್ಕಲ್ ಎಂದಿದ್ದಕ್ಕೆ ರೈತ ಮಹಿಳೆಯ ಕ್ಷಮೆ ಕೇಳಿದ ಸಚಿವ ಮಾಧುಸ್ವಾಮಿ!

ರ‌್ಯಾಸ್ಕಲ್ ಎಂದಿದ್ದಕ್ಕೆ ರೈತ ಮಹಿಳೆಯ ಕ್ಷಮೆ ಕೇಳಿದ ಸಚಿವ ಮಾಧುಸ್ವಾಮಿ!

Published : May 21, 2020, 01:01 PM ISTUpdated : May 21, 2020, 01:17 PM IST

ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ರೈತ ಮಹಿಳೆಯೊಬ್ಬರಿಗೆ ‘ರಾಸ್ಕಲ್‌’ ಎಂದು ಅವಾಚ್ಯವಾಗಿ ನಿಂದಿಸಿದ ಘಟನೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸದ್ಯ ಸಚಿವರು ರೈತ ಮಹಿಳೆ ಬಳಿ ಕ್ಷಮೆ ಯಾಚಿಸಿದ್ದಾರೆ.

ಕೋಲಾರ(ಮೇ.21): ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ರೈತ ಮಹಿಳೆಯೊಬ್ಬರಿಗೆ ‘ರಾಸ್ಕಲ್‌’ ಎಂದು ಅವಾಚ್ಯವಾಗಿ ನಿಂದಿಸಿದ ಘಟನೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸದ್ಯ ಸಚಿವರು ರೈತ ಮಹಿಳೆ ಬಳಿ ಕ್ಷಮೆ ಯಾಚಿಸಿದ್ದಾರೆ.

ಸಚಿವ ಮಾಧುಸ್ವಾಮಿ ಅವರು ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಕೆ.ಸಿ ವ್ಯಾಲಿ ಯೋಜನೆ ವ್ಯಾಪ್ತಿಯ ಕೆರೆಗಳ ಪರಿಶೀಲನೆ ನಡೆಸುತ್ತಿದ್ದರು. ಕೋಲಾರದಲ್ಲಿ ಎಸ್‌. ಅಗ್ರಹಾರ ಗ್ರಾಮದ ಕೆರೆ ಪರಿಶೀಲನೆ ವೇಳೆ ಕೆರೆಕಟ್ಟೆಒಡೆಯದಂತೆ ರೈತ ಸಂಘಟನೆಯ ಮಹಿಳಾ ಕಾರ್ಯಕರ್ತರು ಸಚಿವರಿಗೆ ಮನವಿ ಪತ್ರ ಸಲ್ಲಿಸಲು ಸೇರಿದ್ದರು. ಈ ವೇಳೆ ಕೆರೆ ಒತ್ತುವರಿ ತೆರವು ಮಾಡುವಂತೆಯೂ ಅವರು ಆಗ್ರಹಿಸಿದರು.

ಮಾಧುಸ್ವಾಮಿ ವಿವಾದ: ಆ ಘಟನೆಯನ್ನು ಮಹಿಳೆ ವಿವರಿಸಿದ್ದು ಹೀಗೆ

ಪದೇ ಪದೆ ಅದೇ ವಿಚಾರ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಒಂದು ಹಂತದಲ್ಲಿ ಸಚಿವರು ರೈತ ಮಹಿಳೆಯರನ್ನು ನಿರ್ಲಕ್ಷಿಸಲು ಯತ್ನಿಸಿದರು. ಆದರೂ ಮಹಿಳೆಯರು ಒತ್ತುವರಿ ಕುರಿತು ವಿರೋಧ ವ್ಯಕ್ತಪಡಿಸಿದಾಗ, ಆ ವಿಚಾರವನ್ನು ನನ್ನ ಮುಂದೆ ಯಾಕೆ ಹೇಳುತ್ತೀರಿ, ಸಂಬಂಧಪಟ್ಟವರಿಗೆ(ಸ್ಥಳೀಯ ಜನಪ್ರತಿನಿಧಿಗಳಿಗೆ) ತಿಳಿಸಿ ಎಂದು ಸಿಡಿಮಿಡಿಗೊಳ್ಳುತ್ತಲೇ ಮಾಧುಸ್ವಾಮಿ ಪ್ರತಿಕ್ರಿಯಿಸಿದರು. ಇದರಿಂದ ಆಕ್ರೋಶಗೊಂಡ ಮಹಿಳೆಯರು ನೀವು ಸಂಬಂಧಪಟ್ಟವರಲ್ವಾ? ಸಣ್ಣ ನೀರಾವರಿ ಸಚಿವರಲ್ವಾ ಎಂದು ಕಿಡಿಕಾರಿದಾಗ, ‘ನಾನು ಭಾರೀ ಕೆಟ್ಟಮನುಷ್ಯ ಇದ್ದೀನಿ, ಏಯ್‌ ರಾಸ್ಕಲ್‌, ಮುಚ್ಚು ಬಾಯಿ’ ಎಂದು ಮಹಿಳಾ ಸದಸ್ಯೆಯೊಬ್ಬರನ್ನು ಸಚಿವ ತರಾಟೆಗೆ ತೆಗೆದುಕೊಂಡರು.

"

ಸಚಿವರ ಈ ಮಾತಿಗೆ ರಾಜ್ಯವ್ಯಾಪಿ ತೀವ್ರ ಆಕ್ರೊಶ ವ್ಯಕ್ತವಾಗಿದ್ದು, ಅವರು ಮಹಿಳೆ ಬಳಿ ಕ್ಷಮೆ ಯಾಚಿಸುವಂತೆ ಒತ್ತಾಯ ಮಾಡಲಗಿತ್ತು. ಈ ಸಂಬಂಧ ಸುರ್ಣ ನ್ಯುಸ್ ನಡೆಸಿದ್ದ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಮಹಿಳೆ ಬಳಿ ಕ್ಷಮೆ ಯಾಚಿಸಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!