ರ‌್ಯಾಸ್ಕಲ್ ಎಂದಿದ್ದಕ್ಕೆ ರೈತ ಮಹಿಳೆಯ ಕ್ಷಮೆ ಕೇಳಿದ ಸಚಿವ ಮಾಧುಸ್ವಾಮಿ!

ರ‌್ಯಾಸ್ಕಲ್ ಎಂದಿದ್ದಕ್ಕೆ ರೈತ ಮಹಿಳೆಯ ಕ್ಷಮೆ ಕೇಳಿದ ಸಚಿವ ಮಾಧುಸ್ವಾಮಿ!

Published : May 21, 2020, 01:01 PM ISTUpdated : May 21, 2020, 01:17 PM IST

ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ರೈತ ಮಹಿಳೆಯೊಬ್ಬರಿಗೆ ‘ರಾಸ್ಕಲ್‌’ ಎಂದು ಅವಾಚ್ಯವಾಗಿ ನಿಂದಿಸಿದ ಘಟನೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸದ್ಯ ಸಚಿವರು ರೈತ ಮಹಿಳೆ ಬಳಿ ಕ್ಷಮೆ ಯಾಚಿಸಿದ್ದಾರೆ.

ಕೋಲಾರ(ಮೇ.21): ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ರೈತ ಮಹಿಳೆಯೊಬ್ಬರಿಗೆ ‘ರಾಸ್ಕಲ್‌’ ಎಂದು ಅವಾಚ್ಯವಾಗಿ ನಿಂದಿಸಿದ ಘಟನೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸದ್ಯ ಸಚಿವರು ರೈತ ಮಹಿಳೆ ಬಳಿ ಕ್ಷಮೆ ಯಾಚಿಸಿದ್ದಾರೆ.

ಸಚಿವ ಮಾಧುಸ್ವಾಮಿ ಅವರು ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಕೆ.ಸಿ ವ್ಯಾಲಿ ಯೋಜನೆ ವ್ಯಾಪ್ತಿಯ ಕೆರೆಗಳ ಪರಿಶೀಲನೆ ನಡೆಸುತ್ತಿದ್ದರು. ಕೋಲಾರದಲ್ಲಿ ಎಸ್‌. ಅಗ್ರಹಾರ ಗ್ರಾಮದ ಕೆರೆ ಪರಿಶೀಲನೆ ವೇಳೆ ಕೆರೆಕಟ್ಟೆಒಡೆಯದಂತೆ ರೈತ ಸಂಘಟನೆಯ ಮಹಿಳಾ ಕಾರ್ಯಕರ್ತರು ಸಚಿವರಿಗೆ ಮನವಿ ಪತ್ರ ಸಲ್ಲಿಸಲು ಸೇರಿದ್ದರು. ಈ ವೇಳೆ ಕೆರೆ ಒತ್ತುವರಿ ತೆರವು ಮಾಡುವಂತೆಯೂ ಅವರು ಆಗ್ರಹಿಸಿದರು.

ಮಾಧುಸ್ವಾಮಿ ವಿವಾದ: ಆ ಘಟನೆಯನ್ನು ಮಹಿಳೆ ವಿವರಿಸಿದ್ದು ಹೀಗೆ

ಪದೇ ಪದೆ ಅದೇ ವಿಚಾರ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಒಂದು ಹಂತದಲ್ಲಿ ಸಚಿವರು ರೈತ ಮಹಿಳೆಯರನ್ನು ನಿರ್ಲಕ್ಷಿಸಲು ಯತ್ನಿಸಿದರು. ಆದರೂ ಮಹಿಳೆಯರು ಒತ್ತುವರಿ ಕುರಿತು ವಿರೋಧ ವ್ಯಕ್ತಪಡಿಸಿದಾಗ, ಆ ವಿಚಾರವನ್ನು ನನ್ನ ಮುಂದೆ ಯಾಕೆ ಹೇಳುತ್ತೀರಿ, ಸಂಬಂಧಪಟ್ಟವರಿಗೆ(ಸ್ಥಳೀಯ ಜನಪ್ರತಿನಿಧಿಗಳಿಗೆ) ತಿಳಿಸಿ ಎಂದು ಸಿಡಿಮಿಡಿಗೊಳ್ಳುತ್ತಲೇ ಮಾಧುಸ್ವಾಮಿ ಪ್ರತಿಕ್ರಿಯಿಸಿದರು. ಇದರಿಂದ ಆಕ್ರೋಶಗೊಂಡ ಮಹಿಳೆಯರು ನೀವು ಸಂಬಂಧಪಟ್ಟವರಲ್ವಾ? ಸಣ್ಣ ನೀರಾವರಿ ಸಚಿವರಲ್ವಾ ಎಂದು ಕಿಡಿಕಾರಿದಾಗ, ‘ನಾನು ಭಾರೀ ಕೆಟ್ಟಮನುಷ್ಯ ಇದ್ದೀನಿ, ಏಯ್‌ ರಾಸ್ಕಲ್‌, ಮುಚ್ಚು ಬಾಯಿ’ ಎಂದು ಮಹಿಳಾ ಸದಸ್ಯೆಯೊಬ್ಬರನ್ನು ಸಚಿವ ತರಾಟೆಗೆ ತೆಗೆದುಕೊಂಡರು.

"

ಸಚಿವರ ಈ ಮಾತಿಗೆ ರಾಜ್ಯವ್ಯಾಪಿ ತೀವ್ರ ಆಕ್ರೊಶ ವ್ಯಕ್ತವಾಗಿದ್ದು, ಅವರು ಮಹಿಳೆ ಬಳಿ ಕ್ಷಮೆ ಯಾಚಿಸುವಂತೆ ಒತ್ತಾಯ ಮಾಡಲಗಿತ್ತು. ಈ ಸಂಬಂಧ ಸುರ್ಣ ನ್ಯುಸ್ ನಡೆಸಿದ್ದ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಮಹಿಳೆ ಬಳಿ ಕ್ಷಮೆ ಯಾಚಿಸಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ