ರ‌್ಯಾಸ್ಕಲ್ ಎಂದಿದ್ದಕ್ಕೆ ರೈತ ಮಹಿಳೆಯ ಕ್ಷಮೆ ಕೇಳಿದ ಸಚಿವ ಮಾಧುಸ್ವಾಮಿ!

ರ‌್ಯಾಸ್ಕಲ್ ಎಂದಿದ್ದಕ್ಕೆ ರೈತ ಮಹಿಳೆಯ ಕ್ಷಮೆ ಕೇಳಿದ ಸಚಿವ ಮಾಧುಸ್ವಾಮಿ!

Published : May 21, 2020, 01:01 PM ISTUpdated : May 21, 2020, 01:17 PM IST

ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ರೈತ ಮಹಿಳೆಯೊಬ್ಬರಿಗೆ ‘ರಾಸ್ಕಲ್‌’ ಎಂದು ಅವಾಚ್ಯವಾಗಿ ನಿಂದಿಸಿದ ಘಟನೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸದ್ಯ ಸಚಿವರು ರೈತ ಮಹಿಳೆ ಬಳಿ ಕ್ಷಮೆ ಯಾಚಿಸಿದ್ದಾರೆ.

ಕೋಲಾರ(ಮೇ.21): ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ರೈತ ಮಹಿಳೆಯೊಬ್ಬರಿಗೆ ‘ರಾಸ್ಕಲ್‌’ ಎಂದು ಅವಾಚ್ಯವಾಗಿ ನಿಂದಿಸಿದ ಘಟನೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸದ್ಯ ಸಚಿವರು ರೈತ ಮಹಿಳೆ ಬಳಿ ಕ್ಷಮೆ ಯಾಚಿಸಿದ್ದಾರೆ.

ಸಚಿವ ಮಾಧುಸ್ವಾಮಿ ಅವರು ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಕೆ.ಸಿ ವ್ಯಾಲಿ ಯೋಜನೆ ವ್ಯಾಪ್ತಿಯ ಕೆರೆಗಳ ಪರಿಶೀಲನೆ ನಡೆಸುತ್ತಿದ್ದರು. ಕೋಲಾರದಲ್ಲಿ ಎಸ್‌. ಅಗ್ರಹಾರ ಗ್ರಾಮದ ಕೆರೆ ಪರಿಶೀಲನೆ ವೇಳೆ ಕೆರೆಕಟ್ಟೆಒಡೆಯದಂತೆ ರೈತ ಸಂಘಟನೆಯ ಮಹಿಳಾ ಕಾರ್ಯಕರ್ತರು ಸಚಿವರಿಗೆ ಮನವಿ ಪತ್ರ ಸಲ್ಲಿಸಲು ಸೇರಿದ್ದರು. ಈ ವೇಳೆ ಕೆರೆ ಒತ್ತುವರಿ ತೆರವು ಮಾಡುವಂತೆಯೂ ಅವರು ಆಗ್ರಹಿಸಿದರು.

ಮಾಧುಸ್ವಾಮಿ ವಿವಾದ: ಆ ಘಟನೆಯನ್ನು ಮಹಿಳೆ ವಿವರಿಸಿದ್ದು ಹೀಗೆ

ಪದೇ ಪದೆ ಅದೇ ವಿಚಾರ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಒಂದು ಹಂತದಲ್ಲಿ ಸಚಿವರು ರೈತ ಮಹಿಳೆಯರನ್ನು ನಿರ್ಲಕ್ಷಿಸಲು ಯತ್ನಿಸಿದರು. ಆದರೂ ಮಹಿಳೆಯರು ಒತ್ತುವರಿ ಕುರಿತು ವಿರೋಧ ವ್ಯಕ್ತಪಡಿಸಿದಾಗ, ಆ ವಿಚಾರವನ್ನು ನನ್ನ ಮುಂದೆ ಯಾಕೆ ಹೇಳುತ್ತೀರಿ, ಸಂಬಂಧಪಟ್ಟವರಿಗೆ(ಸ್ಥಳೀಯ ಜನಪ್ರತಿನಿಧಿಗಳಿಗೆ) ತಿಳಿಸಿ ಎಂದು ಸಿಡಿಮಿಡಿಗೊಳ್ಳುತ್ತಲೇ ಮಾಧುಸ್ವಾಮಿ ಪ್ರತಿಕ್ರಿಯಿಸಿದರು. ಇದರಿಂದ ಆಕ್ರೋಶಗೊಂಡ ಮಹಿಳೆಯರು ನೀವು ಸಂಬಂಧಪಟ್ಟವರಲ್ವಾ? ಸಣ್ಣ ನೀರಾವರಿ ಸಚಿವರಲ್ವಾ ಎಂದು ಕಿಡಿಕಾರಿದಾಗ, ‘ನಾನು ಭಾರೀ ಕೆಟ್ಟಮನುಷ್ಯ ಇದ್ದೀನಿ, ಏಯ್‌ ರಾಸ್ಕಲ್‌, ಮುಚ್ಚು ಬಾಯಿ’ ಎಂದು ಮಹಿಳಾ ಸದಸ್ಯೆಯೊಬ್ಬರನ್ನು ಸಚಿವ ತರಾಟೆಗೆ ತೆಗೆದುಕೊಂಡರು.

"

ಸಚಿವರ ಈ ಮಾತಿಗೆ ರಾಜ್ಯವ್ಯಾಪಿ ತೀವ್ರ ಆಕ್ರೊಶ ವ್ಯಕ್ತವಾಗಿದ್ದು, ಅವರು ಮಹಿಳೆ ಬಳಿ ಕ್ಷಮೆ ಯಾಚಿಸುವಂತೆ ಒತ್ತಾಯ ಮಾಡಲಗಿತ್ತು. ಈ ಸಂಬಂಧ ಸುರ್ಣ ನ್ಯುಸ್ ನಡೆಸಿದ್ದ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಮಹಿಳೆ ಬಳಿ ಕ್ಷಮೆ ಯಾಚಿಸಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!