ಕನ್ನಡ ರಾಜ್ಯೋತ್ಸವ ಪ್ರಯುಕ್ತ ‘ಮಾತಾಡ್‌ ಮಾತಾಡ್‌ ಕನ್ನಡ’ ಅಭಿಯಾನ

Oct 26, 2021, 10:59 AM IST

ಬೆಂಗಳೂರು (ಅ.26):  ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅ.24ರಿಂದ ಅ.31ರವರೆಗೆ ಹಮ್ಮಿಕೊಂಡಿರುವ ‘ಕನ್ನಡಕ್ಕಾಗಿ ನಾವು’ ವಿಶೇಷ ಅಭಿಯಾನ ಹಾಗೂ ‘ಮಾತಾಡ್‌ ಮಾತಾಡ್‌ ಕನ್ನಡ’ ಘೋಷವಾಕ್ಯ ಅಡಿ ನಡೆಯುವ ಸರಣಿ ಕಾರ್ಯಕ್ರಮಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿ.ಸುನಿಲ್‌ ಕುಮಾರ್‌  ಚಾಲನೆ ನೀಡಿದ್ದಾರೆ.

'ಕನ್ನಡಕ್ಕಾಗಿ ನಾವು' ಅಭಿಯಾನ ಶುರು: ‘ಮಾತಾಡ್‌ ಮಾತಾಡ್‌ ಕನ್ನಡ’ ಘೋಷ!

ಇದೇ ವೇಳೆ, ರಾಜ್ಯದ ಜನತೆ ಎಲ್ಲೆಡೆ ಕನ್ನಡವನ್ನು ಬಳಕೆ ಮಾಡಬೇಕು. ಈ ಮೂಲಕ ಕನ್ನಡ ಬೆಳೆಸಬೇಕು. ಜತೆಗೆ ಅ.28ರಂದು ಬೆಳಗ್ಗೆ 11 ಗಂಟೆಯಿಂದ 11.30 ಗಂಟೆವರೆಗೆ ಲಕ್ಷಕಂಠಗಳಲ್ಲಿ ಕನ್ನಡ ಗೀತೆಗಳ ಗಾಯನ ಮಾಡಬೇಕು. ಆ ಮೂಲಕ ಪ್ರತಿಯೊಬ್ಬ ಕನ್ನಡಿಗನೂ ಕನ್ನಡಕ್ಕೆ ಗೌರವ ಕೊಡಬೇಕು. ಇದೊಂದು ದಾಖಲೆಯ ಕಾರ್ಯಕ್ರಮ ಆಗಬೇಕು ಎಂದು ಕರೆ ನೀಡಿದ್ದಾರೆ.