ಕೋವಿಡ್ 19: ಸಿಎಂ ಯಡಿಯೂರಪ್ಪ ಚೇತರಿಕೆಗೆ ರಾಜಕೀಯ ಗಣ್ಯರಿಂದ ಪ್ರಾರ್ಥನೆ

Aug 3, 2020, 10:53 AM IST

ಬೆಂಗಳೂರು (ಆ. 03): ಕಳೆದ 5 ತಿಂಗಳಿಂದ ನಾಡಿನ ಜನರನ್ನು ತೀವ್ರವಾಗಿ ಕಾಡುತ್ತಿರುವ ಮಹಾಮಾರಿ ಕೊರೊನಾ ಸೋಂಕು ಈಗ ಸಿಎಂ ಯಡಿಯೂರಪ್ಪ ಅವರಿಗೂ ತಗುಲಿದೆ. ಭಾನುವಾರ ನಡೆಸಿದ ಪರೀಕ್ಷೆಯಲ್ಲಿ ಪಾಸಿಟಿವ್ ರಿಪೋರ್ಟ್ ಬಂದಿದ್ದು ಯಾವುದೇ ಲಕ್ಷಣವಿಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಸಿಎಂ ಶೀಘ್ರದಲ್ಲೇ ಗುಣಮುಖರಾಗಲಿ ಅಂತ ಗಣ್ಯರು ಪ್ರಾರ್ಥಿಸಿದ್ದಾರೆ. ಸಿಟಿ ರವಿ, ಶಿವರಾಮ್ ಹೆಬ್ಬಾರ್, ಸುಧಾಕರ್ ಸೇರಿದಂತೆ ಹಲವು ರಾಜಕೀಯ ನಾಯಕರು ಟ್ವೀಟ್ ಮಾಡಿ ವಿಶ್ ಮಾಡಿದ್ದಾರೆ. 

ಮುಖ್ಯಮಂತ್ರಿ BSY ಗೂ ಅಂಟಿದ ಕೊರೊನಾ, ಆಸ್ಪತ್ರೆಗೆ ದಾಖಲು