Hijab Controversy : ಕೋರ್ಟ್ ಆದೇಶ ಬರೋವರೆಗೂ ಸಮವಸ್ತ್ರ ಸಂಹಿತೆ ಪಾಲಿಸಿ!

Hijab Controversy : ಕೋರ್ಟ್ ಆದೇಶ ಬರೋವರೆಗೂ ಸಮವಸ್ತ್ರ ಸಂಹಿತೆ ಪಾಲಿಸಿ!

Suvarna News   | Asianet News
Published : Feb 04, 2022, 08:57 PM ISTUpdated : Feb 04, 2022, 08:58 PM IST

ನ್ಯಾಯಾಲಯದ ಆದೇಶ ಬರೋವರೆಗೂ ಸಮವಸ್ತ್ರ ಸಂಹಿತೆ ಪಾಲಿಸಿ
ರಾಜ್ಯ ಅಲ್ಪ ಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ಪತ್ರ
ರಾಜ್ಯದಲ್ಲಿ ಮುಂದುವರಿದ ಹಿಜಾಬ್ ಹಗ್ಗಜಗ್ಗಾಟ

ಬೆಂಗಳೂರು (ಫೆ.4): ಉಡುಪಿಯಲ್ಲಿ (Udupi) ಆರಂಭಗೊಂಡ ಹಿಜಾಬ್ (Hijab) ಕಿತ್ತಾಟ ಈಗ ರಾಜ್ಯದ ಹಲವು ಭಾಗಗಳಿಗೂ ವ್ಯಾಪಿಸಿದೆ. ರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಗೂ ಒಳಗಾಗಿದೆ. ಇದರ ನಡುವೆ ಅಲ್ಪ ಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ (Minority Commission Chairman Abdul Azeem) ಪತ್ರ ಬರೆದಿದ್ದು, ನ್ಯಾಯಾಲಯದ ಮುಂದಿನ ಆದೇಶ ಬರುವವರೆಗೂ ಸಮವಸ್ತ್ರ ಸಂಹಿತೆ ಪಾಲನೆ ಮಾಡಿ ಎಂದು ಹೇಳಿದ್ದಾರೆ.

Hijab ಧರಿಸೋದು ಮೂಲಭೂತ ಹಕ್ಕೆಂದು ಘೋಷಿಸಿ: ಹೈಕೋರ್ಟ್‌ ಮೆಟ್ಟಿಲೇರಿದ ಉಡುಪಿ ವಿದ್ಯಾರ್ಥಿನಿ
ಪ್ರಕರಣದಲ್ಲಿ ವಾದ ಪ್ರತಿವಾದ ಮುಂದುವರಿಯುತ್ತಿದೆ. ಇದರಿಂದಾಗಿ ಶಾಂತಿ ಸೌಹಾರ್ದತೆಗೆ ಧಕ್ಕೆ ಬರುವ ಸಾಧ್ಯತೆ ಇದೆ. ಹಿಜಾಬ್ ಪ್ರಕರಣ ಈಗಾಗಲೇ ನ್ಯಾಯಾಲಯದ ಮೆಟ್ಟಿಲೇರಿದ್ದು, ಮುಂದಿನ ಆದೇಶ ಬರುವವರೆಗೂ ಈಗಿರುವ ಸಮವಸ್ತ್ರ ಸಂಹಿತೆಯನ್ನು ಪಾಲಿಸಿ ಎಂದು ಪತ್ರದಲ್ಲಿ ಹೇಳಿದ್ದಾರೆ. ರಾಜ್ಯದ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಅವರು ಈ ಪತ್ರವನ್ನು ಕಳುಹಿಸಿದ್ದಾರೆ. ಫೆ.8ರ ವರೆಗೂ ಕಾಲೇಜು ಯೂನಿಫಾರ್ಮ್ ಧರಿಸಿಯೇ ತೆರಳಬೇಕು ಎಂದು ಇದರಲ್ಲಿ ಹೇಳಲಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more