ರೈತರು ಪರಿಹಾರಕ್ಕೆಂದೇ ಆತ್ಮಹತ್ಯೆ ಮಾಡಿಕೊಳ್ತಾರೆಂದಿದ್ದ ಶಿವಾನಂದ ಪಾಟೀಲ್‌ ಮೇಲೆ ಹಣ ಮಳೆ: ಸಚಿವರಿಂದ ಉಡಾಫೆ ಉತ್ತರ!

ರೈತರು ಪರಿಹಾರಕ್ಕೆಂದೇ ಆತ್ಮಹತ್ಯೆ ಮಾಡಿಕೊಳ್ತಾರೆಂದಿದ್ದ ಶಿವಾನಂದ ಪಾಟೀಲ್‌ ಮೇಲೆ ಹಣ ಮಳೆ: ಸಚಿವರಿಂದ ಉಡಾಫೆ ಉತ್ತರ!

Published : Oct 18, 2023, 08:45 PM IST

ಹೈದರಾಬಾದ್‌ ರೆಸಾರ್ಟ್‌ನಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಮೇಲೆ ಹಣದ ಮಳೆಯನ್ನೇ ಹರಿಸಲಾಗಿದೆ. 

ಬೆಂಗಳೂರು (ಅ.18): ರಾಜ್ಯ ಸರ್ಕಾರದಿಂದ ನೀಡುವ ಪರಿಹಾರಕ್ಕಾಗಿಯೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಹೇಳಿ ವಿವಾದ ಮೈಮೇಲೆ ಎಳೆದುಕೊಂಡಿದ್ದ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಇತ್ತೀಚೆಗೆ ಹೈದರಾಬಾದ್‌ ರೆಸಾರ್ಟ್‌ನಲ್ಲಿ ನಡೆದ ತಮ್ಮ ಪರಿಚಯಸ್ಥರ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದು, ಅವರ ಮೇಲೆ ಹಣದ ಮಳೆಯನ್ನೇ ಹರಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್‌ ಕಾಲಡಿಯಲ್ಲಿ ನೋಟಿನ ರಾಶಿಗಳೇ ಬಿದ್ದಿದ್ದವು. ಸಚಿವರ ನಡೆಯ ವಿರುದ್ಧ ರೈತರು, ಸಾರ್ವಜನಿಕರು ಹಾಗೂ ವಿಪಕ್ಷಗಳಿಂದ ಭಾರಿ ಟೀಕೆ ಎದುರಾಗಿದೆ. 

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ್‌, ಉಡಾಫೆಯಿಂದ ಉತ್ತರಿಸಿದ್ದಾರೆ. ನಾನು ಲಗ್ನಕ್ಕೆ ಹೋಗಬಾರದಾ? ಹಣ ಚೆಲ್ಲುವುದು ಅಲ್ಲಿಯವರ ಸಂಸ್ಕೃತಿಯಾಗಿದೆ. ಅದಕ್ಕೆ ನಾನೇನು ಮಾಡೋಕಾಗತ್ತೆ? ಎಂದು ಪ್ರಶ್ನಿಸಿದ್ದಾರೆ. ಮುಂದುವರೆದು, ಹೈದರಾಬಾದ್‌ ನಲ್ಲಿ ಬರ ಇದೆಯಾ? ಅಲ್ಲಿಯ ಗೃಹ ಸಚಿವರೇ ಕಾರ್ಯಕ್ರಮಕ್ಕೆ ಬಂದಿದ್ರು. ಇದನ್ನೂ ಈಗ ವೈರಲ್ ಮಾಡ್ತೀರಾ ನೀವು? ಯಾರೋ ಮಾಡಿದ್ದಕ್ಕೆ ನಾನು ಮದುವೆಗೆ ಹೋಗಬಾರಾದಾ? ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದೆ ಅಷ್ಟೇ, ನಾನು ಹೋಗಿ ಅವರ ಸಂಸ್ಕೃತಿ ನಿಲ್ಲಿಸೋದಕ್ಕಾಗತ್ತಾ? ಎಂದು ಪ್ರಶ್ನಿಸಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more