ರೈತರು ಪರಿಹಾರಕ್ಕೆಂದೇ ಆತ್ಮಹತ್ಯೆ ಮಾಡಿಕೊಳ್ತಾರೆಂದಿದ್ದ ಶಿವಾನಂದ ಪಾಟೀಲ್‌ ಮೇಲೆ ಹಣ ಮಳೆ: ಸಚಿವರಿಂದ ಉಡಾಫೆ ಉತ್ತರ!

ರೈತರು ಪರಿಹಾರಕ್ಕೆಂದೇ ಆತ್ಮಹತ್ಯೆ ಮಾಡಿಕೊಳ್ತಾರೆಂದಿದ್ದ ಶಿವಾನಂದ ಪಾಟೀಲ್‌ ಮೇಲೆ ಹಣ ಮಳೆ: ಸಚಿವರಿಂದ ಉಡಾಫೆ ಉತ್ತರ!

Published : Oct 18, 2023, 08:45 PM IST

ಹೈದರಾಬಾದ್‌ ರೆಸಾರ್ಟ್‌ನಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಮೇಲೆ ಹಣದ ಮಳೆಯನ್ನೇ ಹರಿಸಲಾಗಿದೆ. 

ಬೆಂಗಳೂರು (ಅ.18): ರಾಜ್ಯ ಸರ್ಕಾರದಿಂದ ನೀಡುವ ಪರಿಹಾರಕ್ಕಾಗಿಯೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಹೇಳಿ ವಿವಾದ ಮೈಮೇಲೆ ಎಳೆದುಕೊಂಡಿದ್ದ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಇತ್ತೀಚೆಗೆ ಹೈದರಾಬಾದ್‌ ರೆಸಾರ್ಟ್‌ನಲ್ಲಿ ನಡೆದ ತಮ್ಮ ಪರಿಚಯಸ್ಥರ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದು, ಅವರ ಮೇಲೆ ಹಣದ ಮಳೆಯನ್ನೇ ಹರಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್‌ ಕಾಲಡಿಯಲ್ಲಿ ನೋಟಿನ ರಾಶಿಗಳೇ ಬಿದ್ದಿದ್ದವು. ಸಚಿವರ ನಡೆಯ ವಿರುದ್ಧ ರೈತರು, ಸಾರ್ವಜನಿಕರು ಹಾಗೂ ವಿಪಕ್ಷಗಳಿಂದ ಭಾರಿ ಟೀಕೆ ಎದುರಾಗಿದೆ. 

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ್‌, ಉಡಾಫೆಯಿಂದ ಉತ್ತರಿಸಿದ್ದಾರೆ. ನಾನು ಲಗ್ನಕ್ಕೆ ಹೋಗಬಾರದಾ? ಹಣ ಚೆಲ್ಲುವುದು ಅಲ್ಲಿಯವರ ಸಂಸ್ಕೃತಿಯಾಗಿದೆ. ಅದಕ್ಕೆ ನಾನೇನು ಮಾಡೋಕಾಗತ್ತೆ? ಎಂದು ಪ್ರಶ್ನಿಸಿದ್ದಾರೆ. ಮುಂದುವರೆದು, ಹೈದರಾಬಾದ್‌ ನಲ್ಲಿ ಬರ ಇದೆಯಾ? ಅಲ್ಲಿಯ ಗೃಹ ಸಚಿವರೇ ಕಾರ್ಯಕ್ರಮಕ್ಕೆ ಬಂದಿದ್ರು. ಇದನ್ನೂ ಈಗ ವೈರಲ್ ಮಾಡ್ತೀರಾ ನೀವು? ಯಾರೋ ಮಾಡಿದ್ದಕ್ಕೆ ನಾನು ಮದುವೆಗೆ ಹೋಗಬಾರಾದಾ? ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದೆ ಅಷ್ಟೇ, ನಾನು ಹೋಗಿ ಅವರ ಸಂಸ್ಕೃತಿ ನಿಲ್ಲಿಸೋದಕ್ಕಾಗತ್ತಾ? ಎಂದು ಪ್ರಶ್ನಿಸಿದ್ದಾರೆ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more