B Shivaram: ಬಿಜೆಪಿಗಿಂತ ಹೆಚ್ಚು ಭ್ರಷ್ಟಚಾರ ಕಾಂಗ್ರೆಸ್‌ನಲ್ಲೇ ನಡೆಯುತ್ತಿದೆ: ಬಿ.ಶಿವರಾಂ ಗಂಭೀರ ಆರೋಪ

B Shivaram: ಬಿಜೆಪಿಗಿಂತ ಹೆಚ್ಚು ಭ್ರಷ್ಟಚಾರ ಕಾಂಗ್ರೆಸ್‌ನಲ್ಲೇ ನಡೆಯುತ್ತಿದೆ: ಬಿ.ಶಿವರಾಂ ಗಂಭೀರ ಆರೋಪ

Published : Feb 02, 2024, 10:57 AM IST

ನಾವು ಅಧಿಕಾರಕ್ಕೆ ಬರುವಾಗ ಬಿಜೆಪಿ ವಿರುದ್ಧ ಕಮಿಷನ್ ಆರೋಪ ಮಾಡಿದ್ವಿ. ಇದೀಗ ಹಾಸನ ಜಿಲ್ಲೆಯಲ್ಲಿ 40% ಮೀರಿ ಲಂಚ ನಡೆಯುತ್ತಿದೆ ಎಂದು ಮಾಜಿ ಸಚಿವ ಬಿ.ಶಿವರಾಂ ಗಂಭೀರ ಆರೋಪ ಮಾಡಿದ್ದಾರೆ.  

ಕಾಂಗ್ರೆಸ್ ಸರ್ಕಾರದ ವಿರುದ್ಧ 40% ಲಂಚದ ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ವಪಕ್ಷದ ನಾಯಕರಿಂದಲೇ ಗಂಭೀರ ಆರೋಪ ಕೇಳಿಬಂದಿದೆ. ಬಿಜೆಪಿ(BJP) ಆಡಳಿತದಂತೇ ಲಂಚಾವತಾರ ನಡೆಯುತ್ತಿದೆ ಎಂದು ಕಾಂಗ್ರೆಸ್(Congress) ನಾಯಕರೊಬ್ಬರು ಹೇಳಿದ್ದಾರೆ. ಹಾಸನ(Hassan) ಜಿಲ್ಲೆಯಲ್ಲಿ 40% ಮೀರಿ ಲಂಚ ನಡೆಯುತ್ತಿದೆ ಎಂದು ಸ್ವಪಕ್ಷದವರ ವಿರುದ್ಧ ಮಾಜಿ ಸಚಿವ ಬಿ.ಶಿವರಾಂ(B.Shivaram) ಗಂಭೀರ ಆರೋಪ ಮಾಡಿದ್ದಾರೆ. ನಾವು ಅಧಿಕಾರಕ್ಕೆ ಬರುವಾಗ ಬಿಜೆಪಿ ವಿರುದ್ಧ ಕಮಿಷನ್ ಆರೋಪ ಮಾಡಿದ್ವಿ. ಆದರೆ ಈಗ ಜಿಲ್ಲೆಯಲ್ಲಿ ಅದಕ್ಕಿಂತ ಹೆಚ್ಚಾಗಿದೆ. ಕಡಿವಾಣ ಹಾಕಿ ಎಂದು ನಾನೇ ಹೇಳಿದ್ದೇನೆ ಎಂದು ಮಾಜಿ ಸಚಿವ ಬಿ.ಶಿವರಾಂ ಹೇಳಿದ್ದಾರೆ. ಬಿ ಶಿವರಾಂ ಆರೋಪ‌ಕ್ಕೆ ಡಿಕೆ ಶಿವಕುಮಾರ್‌ (DK shivakumar)ಸಿಡಿಮಿಡಿಕೊಂಡಿದ್ದಾರೆ. ಏನೆ ಇದ್ರು ಬಂದು ನಮ್ಮ ಹತ್ರ ಮಾತಾಡಬೇಕು. ಇಲ್ಲದಿದ್ರೆ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಡಿಕೆಶಿ ವಾರ್ನಿಂಗ್ ಮಾಡಿದ್ದಾರೆ. ಇನ್ನೂ ಬಿ. ಶಿವರಾಂ ಹೇಳಿಕೆ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಜ್ಞಾನವಾಪಿಯಲ್ಲಿ 31 ವರ್ಷದ ಬಳಿಕ ಮೊದಲ ಪೂಜೆ: ಮಧ್ಯರಾತ್ರಿ ಭಕ್ತರಿಂದ ಹರಹರ ಮಹದೇವ ಘೋಷಣೆ

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more