ಹೈಕಮಾಂಡ್ ಸಲಹೆ ತಿರಸ್ಕರಿಸಿ ತಪ್ಪು ಮಾಡಿದ್ರಾ ಸಿಎಂ ಸಿದ್ದರಾಮಯ್ಯ?

Oct 1, 2024, 11:23 PM IST

ಸಿದ್ದರಾಮಯ್ಯ ವಿರುದ್ದ ಮುಡಾ ಕೇಸ್ ಕೇಳಿಬರುತ್ತಿದ್ದಂತೆ ಹೈಕಮಾಂಡ್ ಮಹತ್ವದ ಸಲಹೆ ನೀಡಿತ್ತು ಅನ್ನೋ ಮಾತುಗಳು ಕೇಳಿಬಂದಿದೆ. ಆದರೆ ಹೈಕಮಾಂಡ್ ಸಲಹೆ ತಿರಸ್ಕರಿಸಿದ ಸಿದ್ದರಾಮಯ್ಯ ಇದೀಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ಸಿದ್ದರಾಮಯ್ಯನವರಿಗೆ ಮುಡಾ ಸೈಟ್ ವಾಪಸ್ ಕೊಡುವಂತೆ ಸೂಚಿಸಿತ್ತು. ಆದರೆ ಸಲಹೆ ತಿರಸ್ಕರಿಸಿದ ಸಿದ್ದರಾಮಯ್ಯ, ಇದರಿಂದ ತಪ್ಪು ಸಂದೇಶ ರವಾನೆಯಾಗಲಿದೆ ಎಂದು ಗಟ್ಟಿ ನಿಲುವು ತಳೆದಿದ್ದರು ಎನ್ನಲಾಗುತ್ತಿದೆ. ಆದರೆ ಸಂಕಷ್ಟ ಹೆಚ್ಚಾಗುತ್ತಿದ್ದಂತೆ ಮುಡಾ ಸೈಟ್ ವಾಪಸ್ ನೀಡಿರುವ ಸಿದ್ದರಾಮಯ್ಯ ಪತ್ನಿ ಪ್ರಕರಣಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಆದರೆ ಪ್ರಕರಣ ಇನ್ನಷ್ಟು ಜಟಿಲಾಗಿದೆ.