ಸಿಎಂ ಸಿದ್ದರಾಮಯ್ಯಗೆ ಬೆಂಬಲ ಸೂಚಿಸುತ್ತಾ ಕಿವಿ ಹಿಂಡಿದ್ರಾ ಖರ್ಗೆ?

Sep 27, 2024, 11:28 PM IST

ಕೊನೆಗೂ ಸಿಎಂ ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಿದ್ದರಾಮಯ್ಯ ಆರೋಪಿ ನಂಬರ್ 1 ಆಗಿದ್ದರೆ, ಅವರ ಪತ್ನಿ ಆರೋಪಿ ನಂ.2 ಆಗಿದ್ದಾರೆ. ಮುಡಾ ಪ್ರಕರಣ ಸಂಬಂಧ ಸಿದ್ದರಾಮಯ್ಯ ವಿರುದ್ದ ದೂರು ದಾಖಲಾಗಿದೆ. ಇತ್ತ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯಗೆ ಬೆಂಬಲ ಸೂಚಿಸಿದ್ದಾರೆ. ಈ ಪೈಕಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬೆಂಬಲ ಸೂಚಿಸುವ ವೇಳೆ ಆಡಿದ ಸೂಚ್ಯ ಮಾತು ಇದೀಗ ಚರ್ಚೆಗೆ ಗ್ರಾಸವಾಗಿದೆ. ಮುಡಾ ಸಂಕಷ್ಟದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಮೂರು ದಿನಗಳ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಇದೇ ವೇಳೆ ಮೈಸೂರಿನಲ್ಲಿ ಶಕ್ತಿ ಪ್ರದರ್ಶನ ನಡೆಸಿದ್ದಾರೆ.