Murugha Matha Row: ಮುರುಘಾ ಶ್ರೀ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು

Murugha Matha Row: ಮುರುಘಾ ಶ್ರೀ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು

Published : Aug 30, 2022, 04:36 PM IST

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ವಿರುದ್ಧ ಅಟ್ರಾಸಿಟಿ ಕೇಸ್‌ ಕೂಡ ದಾಖಲಾಗಿದೆ. ಇದರ ನಡುವೆ, ಅವರನ್ನು ಬಂಧನ ಮಾಡುವಂತೆ ಪ್ರತಿಭಟನೆಗಳು ಆರಂಭವಾಗಿದೆ.

ಬೆಂಗಳೂರು (ಆ. 30): ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮುರುಘಾ ಶ್ರೀ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು ಮಾಡಲಾಗಿದೆ. ನೊಂದ ಬಾಲಕಿಯರ ಪೈಕಿ ಒಬ್ಬಳು ಪರಿಶಿಷ್ಟ ಜಾತಿಗೆ ಸೇರಿದವಳಾಗಿರುವ ಕಾರಣ, ಎಸ್‌ಸಿ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಪೋಕ್ಸೋ ಕಾಯ್ದೆಯಡಿ ಈಗಾಗಲೇ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಅದರ ನಡುವೆ ಈಗ ಅಟ್ರಾಸಿಟಿ ಕೂಡ ದಾಖಲಾಗಿರುವ ಕಾರಣ ದೊಡ್ಡ ಸಂಕಷ್ಟ ಎದುರಾಗಿದೆ. ಮುರುಘಾ ಶ್ರೀ ವಿರುದ್ಧ ದೂರು ನೀಡಿದರ ಪೈಕಿ ಒಬ್ಬರು ಪರಿಶಿಷ್ಟ ಜಾತಿಯ ಬಾಲಕಿಯಾಗಿದ್ದಾಳೆ.ಹಾಗಾಗಿ ಅವರ ದೂರಿನಲ್ಲಿ ಹೆಚ್ಚುವರಿ ಕಲಂಅನ್ನು ಸೇರಿಸಲಾಗಿದೆ. ನ್ಯಾಯಲಯದ ಅನುಮತಿ ಪಡೆದು ಹೆಚ್ಚುವರಿ ಕಲಂ ಸೇರಿಸಲಾಗಿದೆ.

ವದಂತಿಗಳನ್ನು ನಂಬಬೇಡಿ, ಸಂಕಟದಿಂದ ಪಾರಾಗಿ ಬರುತ್ತೇನೆ: ಮುರುಘಾ ಶ್ರೀ

ಈ ಕುರಿತಾಗಿ ಚಿತ್ರದುರ್ಗ ಎಸ್‌ಪಿ ಕೆ.ಪರಶುರಾಮ್‌ ಈ ಮಾಹಿತಿ ನೀಡಿದ್ದಾರೆ. ಈ ನಡುವೆ ತಾತ್ಕಾಲಿಕವಾಗಿ ಪೀಠ ತ್ಯಜಿಸಿ, ತನಿಖೆಗೆ ಸಹಕರಿಸುವಂತೆ ಮೈಸೂರಿನಲ್ಲಿ ಬಿಜೆಪಿ ಮುಖಂಡ ಎಚ್.ವಿಶ್ವನಾಥ್‌ ಹೇಳಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!